Friday, September 20, 2024

ಕುಂದಾಪುರ: ಹೆಜ್ಜೇನು ದಾಳಿಗೆ ವ್ಯಕ್ತಿ ಬಲಿ

Must read

ಕುಂದಾಪುರ: ಹೆಜ್ಜೇನು ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾದ ಘಟನೆ ಕುಂದಾಪುರ ತಾಲೂಕಿನ ಬಸ್ರೂರಿನಲ್ಲಿ ನಡೆದಿದೆ.


ಹೆಜ್ಜೇನು ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಬಸ್ರೂರಿನ ಬಸ್ ನಿಲ್ದಾಣ ಬಳಿಯ ನಿವಾಸಿ ಜಗಜೀವನ್ (76) ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಇವರು ಮನೆಯಿಂದ ಬಸ್ರೂರಿನ ಬಸ್ ನಿಲ್ದಾಣ ಬಳಿ ಬರುವಾಗ ಹೆಜ್ಜೇನು ಹಿಂಡು ದಾಳಿ ನಡೆಸಿವೆ.

ಬಸ್ ನಿಲ್ದಾಣ ಬಳಿಯಿದ್ದ ಹೆಜ್ಜೇನು ಹಿಂಡಿಗೆ ಯಾವುದೋ ಹಕ್ಕಿ ಬಡಿದ ಕಾರಣ ಹೆಜ್ಜೇನುಗಳು ಅದೇ ದಾರಿಯಲ್ಲಿ ಬರುತ್ತಿದ್ದ ಜಗಜೀವನ್ ಅವರ ಮೇಲೆ ದಾಳಿ ನಡೆಸಿವೆ. ಏಕಕಾಲದಲ್ಲಿ ನೂರಾರು ಹೆಜ್ಜೇನುಗಳು ದಾಳಿ ನಡೆಸಿದ್ದರಿಂದ ಮುಖ, ದೇಹ, ಕೈ-ಕಾಲುಗಳೆಲ್ಲ ಊದಿಕೊಂಡು, ಗಂಭೀರ ಗಾಯಗೊಂಡಿದ್ದರು ಎನ್ನಲಾಗಿದೆ.


ತಕ್ಷಣವೇ ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ

spot_img

More articles

LEAVE A REPLY

Please enter your comment!
Please enter your name here