Friday, September 20, 2024

ಶ್ರೀವಿಶ್ವೇಶತೀರ್ಥ ಸ್ವಾಮೀಜಿ ಸಂಸ್ಮರಣೆಗಾಗಿ ಛಾಯಾಚಿತ್ರ ಪ್ರದರ್ಶನ

Must read

ಉಡುಪಿ: ಪೇಜಾವರ ಮಠದ ಕೀರ್ತಿಶೇಷ ಶ್ರೀವಿಶ್ವೇಶತೀರ್ಥ ಸ್ವಾಮೀಜಿ ಪಾಜಕದಲ್ಲಿ ಸ್ಥಾಪಿಸಿದ ಆನಂದತೀರ್ಥ ವಿದ್ಯಾಲಯ ಸಂಸ್ಥೆಯ ದಶಮಾನೋತ್ಸವದ ಪ್ರಯುಕ್ತ ಸ್ವಾಮೀಜಿಯ ಸಂಸ್ಮರಣೆಗಾಗಿ ಪತ್ರಿಕಾ ಛಾಯಾಗ್ರಾಹಕ ಅರುಣಾಚಲ ಹೆಬ್ಬಾರ್ ತೆಗೆದ ಸ್ವಾಮೀಜಿಯ ಛಾಯಾಚಿತ್ರ ಪ್ರದರ್ಶನವನ್ನು ಆಯೋಜಿಸಲಾಗಿತ್ತು.


ಛಾಯಾಚಿತ್ರ ಪ್ರದರ್ಶನವನ್ನು ಆನಂದ ತೀರ್ಥ ವಿದ್ಯಾಲಯದ ಅಧ್ಯಕ್ಷ, ಪೇಜಾವರ ಮಠಾಧೀಶ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಉದ್ಘಾಟಿಸಿದರು. ಸಂಸ್ಥೆಯ ಕಾರ್ಯಾಧ್ಯಕ್ಷರಾದ ಎನ್.ನಾಗರಾಜ ಬಲ್ಲಾಳ್, ಶಿಕ್ಷಣ ತಜ್ಞ ಮಹಾಬಲೇಶ್ವರ ರಾವ್, ಸಂಸ್ಥೆಯ ಟ್ರಸ್ಟಿಗಳಾದ ರೂಪಾ ಬಲ್ಲಾಳ್, ಹರಿಭಟ್, ಸುದರ್ಶನ ರಾವ್, ಲಕ್ಷ್ಮೀನಾರಾಯಣ, ಸುದರ್ಶನ ಸಾಮಗ, ಪಿಯು ಕಾಲೇಜಿನ ಪ್ರಾಂಶುಪಾಲ ವಿಜಯ ರಾವ್, ಶಾಲೆಯ ಪ್ರಾಂಶುಪಾಲೆ ಗೀತಾ ಕೋಟ್ಯಾನ್, ಅರುಣಾಚಲ ಹೆಬ್ಬಾರ್ ಮೊದಲಾದವರು ಉಪಸ್ಥಿತರಿದ್ದರು. ಈ ಛಾಯಾಚಿತ್ರ ಪ್ರದರ್ಶನವು ಡಿ.30ರವರೆಗೆ ನಡೆಯಲಿದೆ.


ಅರುಣಾಚಲ ಹೆಬ್ಬಾರ್ ಸ್ವಾಮೀಜಿಯ ಹಲವು ದಶಕಗಳ ಅವರ ಒಡನಾಟ ದಲ್ಲಿ ಅನೇಕ ಕಡೆ ಅವರೊಂದಿಗೆ ಸಂಚರಿಸಿ ತೆಗೆದಿರುವ ಹಳೆಯ ಛಾಯಾಚಿತ್ರ ಗಳು ಈ ಪ್ರದರ್ಶನದಲ್ಲಿವೆ. ಪ್ರಮುಖವಾಗಿ ಉತ್ತರ ಭಾರತ ಯಾತ್ರೆ ಸಂದರ್ಭದಲ್ಲಿ ದೆಹಲಿ, ಬೋದ್ ಗಯಾ, ಹರಿದ್ವಾರ, ಕಾಶಿ, ಗಯಾ, ಅಯೋಧ್ಯೆ, ಬದರಿನಾಥ ಮುಂತಾದ ತೀರ್ಥಕ್ಷೇತ್ರಗಳ ಛಾಯಾ ಚಿತ್ರಗಳನ್ನು ಇಲ್ಲಿ ಪ್ರದರ್ಶಿಸಲಾಗುತ್ತಿದೆ.

spot_img

More articles

LEAVE A REPLY

Please enter your comment!
Please enter your name here