Friday, September 20, 2024

ಉಡುಪಿ: ಹೋಟೆಲ್ ಮ್ಯಾನೇಜರ್ ಹೃದಯಾಘಾತದಿಂದ ಮೃತ್ಯು

Must read

ಉಡುಪಿ: ಹೊಟೇಲ್ ಮ್ಯಾನೇಜರ್ ಓರ್ವರು ಹಠಾತ್ ಆಗಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಸೋಮವಾರ ರಾತ್ರಿ ನಡೆದಿದೆ.


ಮೃತರನ್ನು ಆತ್ರಾಡಿ ಪರೀಕ ನಿವಾಸಿ ಮಹೇಶ ಶೆಟ್ಟಿ(28) ಎಂದು ಗುರುತಿಸಲಾಗಿದೆ. ಇವರು ಮಂಗಳೂರಿನ ಹೆಸರಾಂತ ಹೋಟೇಲ್ ವೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಅವರಿಗೆ ಸೋಮವಾರ ರಾತ್ರಿ ಹಠಾತ್ ಆಗಿ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.


ಮಹೇಶ್ ಅವರು ಇತ್ತೀಚೆಗೆ ಹೊಟೇಲ್ ಮ್ಯಾನೇಜೆಂಟ್ ಕೋರ್ಸ್ ಮುಗಿಸಿದ್ದರು. ಬಳಿಕ ಉಡುಪಿ, ಮಂಗಳೂರಿನಲ್ಲಿ ಹೊಟೇಲ್ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ಇವರು ಈ ಹಿಂದೆ ಆತ್ರಾಡಿಯಲ್ಲಿ ಡ್ಯಾನ್ಸ್ ಕ್ರಿವ್ ನೃತ್ಯ ತರಬೇತಿ ಸಂಸ್ಥೆಯನ್ನು ಮುನ್ನಡೆಸುತ್ತಿದ್ದರು. ಮ್ಯಾನೇಜರ್ ಕೆಲಸಕ್ಕೆ ಸೇರಿದ್ದರಿಂದ ಡ್ಯಾನ್ಸ್ ಕ್ಲಾಸ್ ಅನ್ನು ಮುನ್ನಡೆಸಲು ಆಗಿರಲಿಲ್ಲ. ಆದರೆ, ನಿನ್ನೆಯಷ್ಟೇ ಡ್ಯಾನ್ಸ್ ಕ್ಲಾಸ್‌ ಅನ್ನು ಮತ್ತೆ ಮುನ್ನಡೆಸುತ್ತೇನೆಂದು ವಾಟ್ಸ್ಅಪ್ ಸ್ಟೇಟ್ಸ್ ಹಾಕಿದ್ದರು ಎನ್ನಲಾಗಿದೆ. ಮೃತರು ತಂದೆ, ತಾಯಿ, ಸಹೋದರ, ಸಹೋದರನ್ನು ಅಗಲಿದ್ದಾರೆ.

spot_img

More articles

LEAVE A REPLY

Please enter your comment!
Please enter your name here