Friday, September 20, 2024

ಶ್ರೀಕ್ಷೇತ್ರ ಗೋಕರ್ಣಕ್ಕೆ‌ ಪಲಿಮಾರು ಶ್ರೀ ಭೇಟಿ

Must read

ಉಡುಪಿ: ಎಳ್ಳಮಾವಾಸ್ಯೆಯ ಪ್ರಯುಕ್ತ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಗೋಕರ್ಣಕ್ಕೆ‌ ಪಲಿಮಾರು ಮಠಾಧೀಶರಾದ ವಿದ್ಯಾಧೀಶತೀರ್ಥ ಸ್ವಾಮೀಜಿ ಹಾಗೂ ಕಿರಿಯ ಯತಿಗಳಾದ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ಭೇಟಿ ನೀಡಿ ದೇವರ ದರ್ಶನ ಮಾಡಿದರು.

ಈ ಸಂದರ್ಭದಲ್ಲಿ ಗೋಕರ್ಣದ ಶ್ರೀ ಮಹಾಗಣಪತಿ ಮತ್ತು ಮಹಾಬಲೇಶ್ವರ ದೇವಾಲಯದ ವತಿಯಿಂದ ಉಭಯ ಶ್ರೀಪಾದರನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಯಿತು. ಆ ಬಳಿಕ ಶ್ರೀಗಳು ಮಹಾಬಲೇಶ್ವರನಿಗೆ ಪಂಚಾಮೃತ ಅಭಿಷೇಕ, ಅರ್ಚನೆ, ಪೂಜೆ ಮಾಡಿದರು. ನಂತರ ಶ್ರೀಗಳು ಅಲ್ಲಿಯೇ ಹತ್ತಿರದಲ್ಲಿದ್ದ ಕಡಲ ಕಿನಾರೆಯಲ್ಲಿ ಪುಣ್ಯ ಸ್ನಾನ ಮಾಡಿದರು.

spot_img

More articles

LEAVE A REPLY

Please enter your comment!
Please enter your name here