Friday, September 20, 2024

ಅಯೋಧ್ಯೆಯಲ್ಲಿ ಪೇಜಾವರ ಶ್ರೀ ನೇತೃತ್ವದಲ್ಲಿ 48 ದಿನಗಳ ಮಂಡಲೋತ್ಸವ ಆರಂಭ

Must read

ಉಡುಪಿ: ಅಯೋಧ್ಯೆಯ ನೂತನ ಮಂದಿರದಲ್ಲಿ ಶ್ರೀರಾಮನ‌ ವಿಧ್ಯುಕ್ತ ಪ್ರತಿಷ್ಠಾಪನೆಯ ನಂತರ ಪೇಜಾವರ ಶ್ರೀಗಳ ನೇತೃತ್ವದಲ್ಲಿ ಇಂದಿನಿಂದ 48 ದಿನಗಳ ಮಂಡಲೋತ್ಸವ ಆರಂಭಗೊಂಡಿದೆ.

ಪೇಜಾವರ ಶ್ರೀಗಳು ಮಂಗಳವಾರವೂ ವಿವಿಧ ಮಂತ್ರಗಳಿಂದ ಪ್ರತಿಮೆಗೆ ತತ್ವನ್ಯಾಸಾದಿಗಳನ್ನು ನೆರವೇರಿಸಿ ಕಲಶಪೂಜೆ, ಚಾಮರಸೇವೆ, ಮಂಗಳಾರತಿಗಳನ್ನು ನೆರವೇರಿಸಿ ಪೂಜೆ ಸಲ್ಲಿಸಿದರು.

ಇದಕ್ಕೂ ಮೊದಲು ಪಿಲೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಚಾರ್ಯ ವಿದ್ವಾನ್ ಸತ್ಯನಾರಾಯಣಾಚಾರ್ಯ , ವಿಷ್ಣುಮೂರ್ತಿ ಆಚಾರ್ಯ , ಶಶಾಂಖ ಭಟ್ ಲಕ್ಷ್ಮೀನಾರಾಯಣ ಭಟ್ ಮೊದಲಸದವರ ನೇತೃತ್ವದಲ್ಲಿ ವಿವಿಧ ಹೋಮಹವನಾದಿಗಳು ಕಲಶಾರಾಧನೆ ಇತ್ಯಾದಿಗಳು ನೆರವೇರಿದವು

spot_img

More articles

LEAVE A REPLY

Please enter your comment!
Please enter your name here