Saturday, September 21, 2024

ಕೋಟ: ಬೈಕ್ ಸ್ಕಿಡ್; ಯುವಕ ಸ್ಥಳದಲ್ಲೇ ಮೃತ್ಯು

Must read

ಉಡುಪಿ: ಬೈಕ್ ವೊಂದು ಸ್ಕಿಡ್ ಆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಮಸೀದಿ ಬಳಿ ಸಂಭವಿಸಿದೆ.

ಕೋಟ ಮಣೂರು ನಿವಾಸಿ ಸುರೇಶ್ ಆಚಾರ್ಯ ಅವರ ಮಗ ವಿಕಾಸ್ ಆಚಾರ್ಯ (22) ಮೃತದುರ್ದೈವಿ. ಇವರು ನಿನ್ನೆ ರಾತ್ರಿ 1:30 ರ ಸುಮಾರಿಗೆ ಸಾಸ್ತಾನ ದಿಂದ ಕೋಟ ಮಣೂರು ಕಡೆ ಬರುತ್ತಿದ್ದರು. ಈ ವೇಳೆ ಕೋಟ ಗುಜಿರಿ ಅಂಗಡಿ ಸಮೀಪ ಬೈಕ್ ನಿಯಂತ್ರಣ ತಪ್ಪಿದ ಪರಿಣಾಮ ಹೆದ್ದಾರಿಯ ಡಿವೈಡರ್  ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಗಂಭೀರವಾಗಿ ಗಾಯಗೊಂಡ ಸುರೇಶ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

spot_img

More articles

LEAVE A REPLY

Please enter your comment!
Please enter your name here