Friday, September 20, 2024

ಕಾರ್ಕಳ: ಕ್ರೇನ್ ಢಿಕ್ಕಿ ಹೊಡೆದು ಪಾದಚಾರಿ ಮೃತ್ಯು

Must read

ಉಡುಪಿ: ಕ್ರೇನ್ ಢಿಕ್ಕಿ ಹೊಡೆದು ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರ್ಕಳ ಅಯ್ಯಪ್ಪ ನಗರ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ.

ಮೃತರನ್ನು ಅಂಗಾರ(75) ಎಂದು ಗುರುತಿಸಲಾಗಿದೆ. ಅಂಗಾರ ಕುಕ್ಕುಂದೂರು ಅಯ್ಯಪ್ಪ ನಗರದಿಂದ ಕುಕ್ಕುಂದೂರು ಜಲದುರ್ಗದ ತನ್ನ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಕಾರ್ಕಳ ಜೋಡುರಸ್ತೆಯಿಂದ ಅಯ್ಯಪ್ಪ ನಗರದ ಕಡೆಗೆ ಹೋಗುತ್ತಿದ್ದ ಕ್ರೇನ್ ಅಂಗಾರರಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

spot_img

More articles

LEAVE A REPLY

Please enter your comment!
Please enter your name here