Friday, October 18, 2024

ಹೆಜಮಾಡಿ: ಸಂಚರಿಸುತ್ತಿದ್ದ ಬಸ್ಸಿನಲ್ಲಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು

Must read

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಹೆಜಮಾಡಿ ಟೋಲ್ ಗೇಟ್ ಬಳಿ ಶುಕ್ರವಾರ ರಾತ್ರಿ ತಡೆ ರಹಿತ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಟೋಲ್ ಸಿಬ್ಬಂದಿ ಸಾರ್ವಜನಿಕರೊಂದಿಗೆ ಸೇರಿ ಬೆಂಕಿ ನಂದಿಸಲು ಯತ್ನಿಸಿದರು. ಬಳಿಕ ಅದಾನಿ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಮೂಲಕ ಭಾರೀ ಅವಘಡ ತಪ್ಪಿಸಿದಂತಾಗಿದೆ.

ಉಡುಪಿ ಕಡೆಗೆ ಪ್ರಯಾಣಿಕರನ್ನು ಸಾಗಿಸುತ್ತಿದ್ದ ಮಂಜುನಾಥ ಹೆಸರಿನ ಖಾಸಗಿ ಬಸ್ಸಿನಲ್ಲಿ ಹೆಜಮಾಡಿಯ ಕಿರು ಟೋಲ್ ಗೇಟ್ ಬಳಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಚಾಲಕನ ಗಮನಕ್ಕೆ ಬಂದು ಬಸ್ ನಿಲ್ಲಿಸಿ ಕಾರ್ಯಾಚರಿಸಲಾಯಿತು. ಬಸ್ಸಿನ ತಾಂತ್ರಿಕ ದೋಷವೇ ಈ ಅವಘಢಕ್ಕೆ ಕಾರಣ ಎನ್ನಲಾಗಿದೆ. ಯಾವುದೇ ಸಾವು ನೋವು ಸಂಭವಿಸಿಲ್ಲ.

spot_img

More articles

LEAVE A REPLY

Please enter your comment!
Please enter your name here