Friday, September 20, 2024

ಪಕ್ಷ ವಿರೋಧಿ ಚಟುವಟಿಕೆ: ಮೂವರು ಬಿಜೆಪಿ ಬೆಂಬಲಿತ ಗ್ರಾಪಂ ಸದಸ್ಯರ ಉಚ್ಚಾಟನೆ

Must read

ಉಡುಪಿ: ಉದ್ಯಾವರ ಗ್ರಾಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಮೂವರು ಬಿಜೆಪಿ ಬೆಂಬಲಿತ ಮೂವರು ಸದಸ್ಯರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಲಾಗಿದೆ.

ಬಿಜೆಪಿಯ ಅಧಿಕೃತ ಅಧ್ಯಕ್ಷ ಸ್ಥಾನದ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಅವರ ಸೋಲಿಗೆ ಕಾರಣರಾಗಿರುವ ಮಾಲತಿ ಮತ್ತು ಅವರಿಗೆ ಬೆಂಬಲಿಸಿರುವ ಗ್ರಾಪಂ ಸದಸ್ಯರಾದ ಗಿರೀಶ್ ಸುವರ್ಣ ಹಾಗೂ ಫ್ರೀಡಾ ಡಿಸೋಜ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ ಕಾರಣಕ್ಕಾಗಿ ಕಾಪು ಮಂಡಲ ಅಧ್ಯಕ್ಷರ ಶಿಫಾರಸ್ಸಿನ ಮೇರೆಗೆ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸೂಚನೆಯಂತೆ ಕೆಲವು ವರ್ಷಗಳ ಕಾಲ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಗಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ಎಸ್. ಕಲ್ಮಾಡಿ ತಿಳಿಸಿದ್ದಾರೆ.

spot_img

More articles

LEAVE A REPLY

Please enter your comment!
Please enter your name here