Thursday, September 19, 2024

ಉಡುಪಿ: ವಿಶ್ವ ಬಂಟರ ಸಮ್ಮೇಳನ; ವೈಭವದ ಹಸಿರು ಹೊರೆಕಾಣಿಕೆ ಮೆರವಣಿಗೆ

Must read

ಉಡುಪಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಅ.28-29 ರಂದು ನಡೆಯಲಿರುವ ವಿಶ್ವ ಬಂಟರ ಸಮ್ಮೇಳನ-2023ರ ಪೂರ್ವಭಾವಿಯಾಗಿ ಹಸಿರು ಹೊರೆಕಾಣಿಕೆ ಮೆರವಣಿಗೆ ವಿಜೃಂಭಣೆಯಿಂದ ನಡೆಯಿತು.

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು, ನಗರದ ಜೋಡುಕಟ್ಟೆಯಲ್ಲಿ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು.
ಜೋಡುಕಟ್ಟೆಯಿಂದ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದವರೆಗೆ ಹಸಿರು ಹೊರೆಕಾಣಿಕೆ ಮೆರವಣಿಗೆ ಸಾಗಿಬಂತು. ಉಡುಪಿ, ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಯ 48 ಬಂಟರ ಸಂಘಟನೆಯ ಪ್ರತಿನಿಧಿಗಳು ಈ ಹಸಿರು ಹೊರೆಕಾಣಿಕೆಯಲ್ಲಿ ಭಾಗವಹಿಸಿದ್ದರು.

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಜತೆ ಕಾರ್ಯದರ್ಶಿ ಚಂದ್ರಹಾಸ್ ಡಿ ಶೆಟ್ಟಿ, ವಿಶ್ವ ಬಂಟರ ಕ್ರೀಡಾಕೂಟದ ಸಂಚಾಲಕ ಗಿರೀಶ್ ಶೆಟ್ಟಿ ತೆಳ್ಳಾರು, ಸಹಸಂಚಾಲಕ ಡಾ ರೋಶನ್ ಕುಮಾರ್ ಶೆಟ್ಟಿ, ಹೊರೆಕಾಣಿಕೆ ಸಮಿತಿಯ ಸಾಯಿಣಾಥ ಶೆಟ್ಟಿ ಶಿರ್ವ, ಕಾಪು ವಾಸುದೇವ ಶೆಟ್ಟಿ, ಉದ್ಯಮಿ ಪುರುಷೋತ್ತಮ್ ಪಿ ಶೆಟ್ಟಿ, ಜಯರಾಜ್ ಹೆಗ್ಡೆ, ಶಿವಪ್ರಸಾದ್ ಹೆಗ್ಡೆ ಹಿರೇಬೆಟ್ಟು, ಮನೋಹರ್ ಶೆಟ್ಟಿ ತೋನ್ಸೆ, ಬೈಕಾಡಿ ಸುಪ್ರಸಾದ್ ಶೆಟ್ಟಿ, ನಾಗೇಶ್ ಹೆಗ್ಡೆ ಹಾಗೂ ಇತರರು ಉಪಸ್ಥಿತರಿದ್ದರು.

spot_img

More articles

LEAVE A REPLY

Please enter your comment!
Please enter your name here