ಉಡುಪಿ: ಮಣಿಪಾಲದ ಸಿಂಡಿಕೇಟ್ ಸರ್ಕಲ್ ಬಳಿಯ ಉನ್ನತ ರೆಸಿಡೆನ್ಸಿಯಲ್ಲಿ ವೇಶ್ಯಾವಾಟಿಕೆಗೆ ದಂಧೆ ನಡೆಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿ, ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ.
ಖಚಿತ ಮಾಹಿತಿಯಂತೆ ಉಡುಪಿ ಮಹಿಳಾ ಪೊಲೀಸ್ ಠಾಣೆಯ ನಿರೀಕ್ಷಕ ಜಯಾನಂದ ಕೆ. ದಾಳಿ ನಡೆಸಿ, ದಂಧೆ ನಡೆಸುತ್ತಿದ್ದ ಗಣೇಶ್, ಸುಧೀರ್ ಮತ್ತು ಮಾರುತಿ ಎಂಬವರನ್ನು ಬಂಧಿಸಿ, ಕೃತ್ಯಕ್ಕೆ ಸಂಬಂಧಿಸಿದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಅದೇ ರೀತಿ ಇಬ್ಬರು ಸಂತ್ರಸ್ತ ಮಹಿಳೆಯರನ್ನು ರಕ್ಷಿಸಿದ್ದಾರೆ.
ಪ್ರಕರಣದ ಆರೋಪಿಗಳು ಜಗದೀಶ ಯಾನೆ ಜಗ್ಗ ಎಂಬಾತನ ಜೊತೆ ಸೇರಿ ವೇಶ್ಯಾವಾಟಿಕೆ ದಂಧೆ ನಡೆಸಿ ಅಕ್ರಮ ಲಾಭ ಪಡೆಯುತ್ತಿದ್ದರು ಎನ್ನಲಾಗಿದೆ. ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.