Friday, September 20, 2024

ಉಡುಪಿ: ಪುತ್ತಿಗೆ ಪರ್ಯಾಯ ಮಹೋತ್ಸವದ ಚಪ್ಪರ ಮುಹೂರ್ತ

Must read

ಉಡುಪಿ: ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಚತುರ್ಥ ಪರ್ಯಾಯೋತ್ಸವದ ಅಂಗವಾಗಿ ಚಪ್ಪರ ಮುಹೂರ್ತವನ್ನು ಇಂದು ನೆರವೇರಿಸಲಾಯಿತು.


ಮಠದ ಪುರೋಹಿತ ರಾಘವೇಂದ್ರ ಕೊಡಂಚರ ಪೌರೋಹಿತ್ಯದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯಿತು. ಚಪ್ಪರ ನಿರ್ವಹಣೆಯ ರಾಜೇಶ್ , ಮುಚ್ಚೂರು ರಾಮಚಂದ್ರ ಭಟ್, ನಾಗರಾಜ್ ಉಪಾಧ್ಯ ಹಾಗೂ ಮಠದ ಮೇಸ್ತ್ರಿ ಪದ್ಮನಾಭ ಅವರಿಗೆ ಕಾರ್ಯ ನಿರ್ವಹಣೆಯ ಮುಹೂರ್ತ ಪ್ರಸಾದ ನೀಡಲಾಯಿತು.


ಈ ಸಂದರ್ಭದಲ್ಲಿ ಸಮಿತಿಯ ಕಾರ್ಯಾಧ್ಯಕ್ಷ ಕೆ. ರಘುಪತಿ ಭಟ್ ಪರ್ಯಾಯ ಪ್ರಚಾರಕ್ಕಾಗಿ ಮಾಡಲ್ಪಟ್ಟ ವಾಹನ ಸ್ಟಿಕರ್ಸ್ ಗಳನ್ನು ಬಿಡುಗಡೆಗೊಳಿಸಿದರು.


ಮಠದ ದಿವಾನರಾದ ನಾಗರಾಜ ಆಚಾರ್ಯ, ಪ್ರಸನ್ನ ಆಚಾರ್ಯ, ಕೋಶಾಧಿಕಾರಿ ರಂಜನ್ ಕಲ್ಕೂರ್, ಕಾರ್ಯದರ್ಶಿ ರಾಘವೇಂದ್ರ ಕಿಣಿ, ಸಮಿತಿಯ ಪದಾಧಿಕಾರಿಗಳಾದ ಗುರುರಾಜ ಉಪಾಧ್ಯ, ವಿಷ್ಣುಮೂರ್ತಿ ಉಪಾಧ್ಯ, ರವೀಂದ್ರ ಆಚಾರ್ಯ, ರಘುಪತಿ ರಾವ್, ಹಯವದನ ಭಟ್, ರಾಮ ಕೊಡಂಚ , ನಾಗರಾಜ ರಾವ್, ರಾಮಚಂದ್ರ ಸನಿಲ್, ಸುಮಿತ್ರಾ ಕೆರೆಮಠ, ಅಮಿತ ಕ್ರಮಧಾರಿ, ಸರೋಜಾ, ಗೀತಾ ಉಪಸ್ಥಿತರಿದ್ದರು. ಮಠದ ರಮೇಶ್ ಭಟ್ ಕೆ. ಸ್ವಾಗತಿಸಿ, ವಂದಿಸಿದರು

spot_img

More articles

LEAVE A REPLY

Please enter your comment!
Please enter your name here