Friday, September 20, 2024

ಜೆಎನ್ 1 ರೂಪಾಂತರಿ ಹಾನಿಕಾರಕವಲ್ಲ, ಆತಂಕ ಪಡುವ ಅಗತ್ಯ ಇಲ್ಲ: ಸಚಿವ ದಿನೇಶ್‌ ಗುಂಡೂರಾವ್

Must read

ಬೆಂಗಳೂರು: ಕೋವಿಡ್ ನ ಜೆಎನ್ 1 ರೂಪಾಂತರಿ‌ ವೇಗವಾಗಿ ಹರಡುವ ವೈರಾಣು. ಆದರೆ ಇದು ಹಾನಿಕಾರಕ ಅಲ್ಲ, ಸಾವು ಕೂಡಾ ವಿರಳ. ಈ ನಿಟ್ಟಿನಲ್ಲಿ ಆತಂಕ ಹಾಗೂ ಭಯ ಸೃಷ್ಟಿ ಅಗತ್ಯ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.


ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದೇಶದಲ್ಲಿ 20 ಜೆ ಎನ್ 1 ಪ್ರಕರಣಗಳಿದ್ದು, ಗೋವಾದಲ್ಲಿ 18, ಮಹಾರಾಷ್ಟ್ರ ಹಾಗೂ ಕೇರಳದಲ್ಲಿ 1 ಪತ್ತೆಯಾಗಿದೆ. ನಮ್ಮಲ್ಲಿ 24 ಗಂಟೆಯಲ್ಲಿ 1020 ಟೆಸ್ಟಿಂಗ್ ಆಗಿದೆ. ಪ್ರತಿ ದಿನ ಇದನ್ನು ಹೆಚ್ಚಳ ಮಾಡಬೇಕು ಉದ್ದೇಶ ಇದೆ. ಸಾರಿ ಕೇಸ್ ಗಳನ್ನು ಆರ್ ಟಿ ಪಿ ಸಿ ಆರ್ ಮಾಡಬೇಕು. ವೆಂಟಿಲೇಟರ್ ನಿರ್ವಹಣೆಗೆ ಸಹಕಾರ ಕೊಡಬೇಕು ಎಂದು ಮನವಿ ಮಾಡಿದ್ದೇವೆ. ಐಸಿಎಂಆರ್ ಫೋರ್ಟಲ್ ಡೇಟಾ ಮಾಹಿತಿ ಸಿಗುತ್ತಿಲ್ಲ. ಪೋರ್ಟಲ್ ಸರಿಪಡಿಸಲು ಮನವಿ ಮಾಡಿದ್ದೇವೆ ಎಂದು ತಿಳಿಸಿದರು.


ಕೇರಳದಲ್ಲಿ ಐದು ಜನರ ಸಾವಿನ ಪ್ರಕರಣಗಳು ವರದಿಯಾಗಿದ್ದು ಹಾರ್ಟ್, ಕ್ಯಾನ್ಸರ್ ಸಮಸ್ಯೆ ಇದ್ದವರಿಗೆ ಕೋವಿಡ್ ಆದಾಗ ಸಾವು ಸಂಭವಿಸಿದೆ. ಕರ್ನಾಟಕದಲ್ಲಿ ಒಂದು ಸಾವು ಆಗಿದ್ದು, ಅವರಿಗೆ ಹೃದಯ ಸಂಬಂಧಿ ಕಾಯಿಲೆ ಮತ್ತು ಟಿಬಿ ಕಾಯಿಲೆ ಕೂಡಾ ಇತ್ತು. ಜೊತೆಗೆ ಕೋವಿಡ್ ಬಂದ ಹಿನ್ನಲೆಯಲ್ಲಿ ಅವರ ಸಾವು ಆಗಿದೆ ಎಂದರು.

spot_img

More articles

LEAVE A REPLY

Please enter your comment!
Please enter your name here