Tuesday, September 17, 2024

ಉಡುಪಿ: ಕಸದ ತೊಟ್ಟಿಯಲ್ಲಿ ವ್ಯಕ್ತಿಯ ಶವ ಪತ್ತೆ

Must read

ಉಡುಪಿ: ಉಡುಪಿ ಶಿರಿಬೀಡು ವಾರ್ಡ್ ಕೆಎಸ್ಆರ್ ಟಿಸಿ ಬಸ್ ನಿಲ್ದಾಣ ಬಳಿಯ ಕಸದ ತೊಟ್ಟಿಯ ಮಧ್ಯದಲ್ಲಿ ಇಂದು ಬೆಳಿಗ್ಗೆ ವ್ಯಕ್ತಿಯೋರ್ವರು ಪ್ರಜ್ಞಾಹೀನಸ್ಥಿತಿಯಲ್ಲಿ ಮಲಗಿರುವುದು ಕಂಡುಬಂದಿದೆ.


ವ್ಯಕ್ತಿ ಮಲಗಿರುವುದನ್ನು ಕಂಡಂತಹ ಸ್ಥಳೀಯರು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ತೆರಳಿದ ಒಳಕಾಡು ಅವರು, ವ್ಯಕ್ತಿಯನ್ನು ಜಿಲ್ಲಾಸ್ಪತ್ರೆಗೆ ಕೊಂಡೊಯ್ದರು. ಅಲ್ಲಿ ಪರೀಕ್ಷಿಸಿದ ವೈದ್ಯರು ಅದಾಗಲೇ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.


ಮೃತರನ್ನು ಸಂತೋಷ್ ಎಂದು ಗುರುತಿಸಲಾಗಿದೆ. ಸಂಬಂಧಿಕರು ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯವಾಣಿ ಕೇಂದ್ರವನ್ನು ಸಂಪರ್ಕಿಸಲು ಸೂಚಿಸಲಾಗಿದೆ.

spot_img

More articles

LEAVE A REPLY

Please enter your comment!
Please enter your name here