Sunday, September 8, 2024

ಉಡುಪಿ: ಚಲಿಸುತ್ತಿದ್ದ ಆಟೋದಲ್ಲೇ ಚಾಲಕನಿಗೆ ಹೃದಯಾಘಾತ; ಇಬ್ಬರು ಪ್ರಯಾಣಿಕರಿಗೆ ಗಾಯ

Must read

ಉಡುಪಿ: ಚಲಿಸುತ್ತಿದ್ದ ಆಟೋದಲ್ಲೇ ಚಾಲಕರೊಬ್ಬರಿಗೆ ಹೃದಯಾಘಾತ ಸಂಭವಿಸಿದ ಪರಿಣಾಮ ವಿದ್ಯುತ್ ಕಂಬವೊಂದಕ್ಕೆ ರಿಕ್ಷಾ ಡಿಕ್ಕಿ ಹೊಡೆದು ಇಬ್ಬರು ಪ್ರಯಾಣಿಕರು ಗಾಯಗೊಂಡ ಘಟನೆ ಉಡುಪಿಯಲ್ಲಿ ನಡೆದಿದೆ.


ಕಾಡುಬೆಟ್ಟು ನಿವಾಸಿ ರಿಕ್ಷಾ ಚಾಲಕ ಸುರೇಶ ಎಂಬವರು ತಮ್ಮ ರಿಕ್ಷಾದಲ್ಲಿ ಇಬ್ಬರು ಮಹಿಳಾ ಪ್ರಯಾಣಿಕರನ್ನು ಅಜ್ಜರಕಾಡುವಿನಿಂದ ಬಸ್ ನಿಲ್ದಾಣದ ಕಡೆಗೆ ಕರೆದುಕೊಂಡು ಹೋಗುತ್ತಿದ್ದರು. ಈ ವೇಳೆ ಅವರಿಗೆ ಹಠಾತ್ ಆಗಿ ಕುಸಿದು ಬಿದ್ದಿದ್ದರು. ಅದೇ ರಸ್ತೆಯಲ್ಲಿ ಬಂದ ಇನ್ನೋರ್ವ ರಿಕ್ಷಾ ಚಾಲಕ ಹಾಗೂ ಪ್ರಯಾಣಿಕರು ತಕ್ಷಣವೇ ಸುರೇಶ್ ಅವರನ್ನು ಉಪಚರಿಸಿ ಅಜ್ಜರಕಾಡು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಚಾಲಕನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಸುರೇಶ್ ಅವರು ಒಮ್ಮೇಲೆ ಕುಸಿದು ಬಿದ್ದ ಪರಿಣಾಮ ಚಲಾಯಿಸುತ್ತಿದ್ದ ರಿಕ್ಷಾವು ವಿರುದ್ಧ ದಿಕ್ಕಿನಲ್ಲಿ ಚಲಿಸಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಈ ಸಂದರ್ಭದಲ್ಲಿ ಇಬ್ಬರು ಮಹಿಳಾ ಪ್ರಯಾಣಿಕರು ಗಾಯಗೊಂಡಿದ್ದಾರೆ ಎನ್ನಲಾಗಿದೆ.

spot_img

More articles

LEAVE A REPLY

Please enter your comment!
Please enter your name here