Friday, September 20, 2024

ಅಂಪಾರು: ಲಕ್ಷಾಂತರ ಮೌಲ್ಯದ ಅಡಿಕೆ ಕಳವು; ಮೂವರ ಬಂಧನ

Must read

ಶಂಕರನಾರಾಯಣ: ಕುಂದಾಪುರ ತಾಲೂಕಿನ ಅಂಪಾರು ಗ್ರಾಮದ ನೈಲಕೊಂಡ ಕೆ. ಉಮೇಶ ಎಂಬವರ ಮನೆಯ ಅಂಗಳದಲ್ಲಿ ಒಣಗಿಸಿದ್ದ ಲಕ್ಷಾಂತರ ಮೌಲ್ಯದ ಅಡಿಕೆ ಕಳವು ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ.


ಬಂಧಿತ ಆರೋಪಿಗಳನ್ನು ಕಾವ್ರಾಡಿ ಗ್ರಾಮದ ಇಮ್ರಾನ್ (19), ಖಾಜಾ ಅಖೀಬ್ (19) ಹಾಗೂ ಮುಝಾಫರ್ ( 26) ಎಂದು ಗುರುತಿಸಲಾಗಿದೆ. ಡಿ. 14ರಂದು ಕೆ. ಉಮೇಶ ಅವರ ಮನೆಯ ಅಂಗಳದಲ್ಲಿ ಒಣಗಿಸಿದ್ದ ಸುಮಾರು 1 ಲಕ್ಷ ಮೌಲ್ಯದ ಸುಮಾರು 16 ಚೀಲದಷ್ಟು ಸಿಪ್ಪೆ ಅಡಿಕೆ (480 ಕೆ.ಜಿ)ಯನ್ನು ಕಳ್ಳರು ಕಳವು ಮಾಡಿಕೊಂಡು ಹೋಗಿದ್ದರು. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕಾರ್ಯಾಚರಣೆಗೆ ಇಳಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ, ಕಳವು ಮಾಡಿ ಮಾರಾಟ ಮಾಡಿದ್ದ 1.08 ಕ್ವಿಂಟಲ್ ಅಡಿಕೆ ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರು ಹಾಗೂ ಒಂದು ಸ್ಕೂಟರ್ ಸಹಿತ ಒಟ್ಟು ಅಂದಾಜು 5.28 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

spot_img

More articles

LEAVE A REPLY

Please enter your comment!
Please enter your name here