Thursday, September 19, 2024

ಪಡುಬಿದ್ರಿ ಸ್ಕೂಟರ್ ಗೆ ಬಸ್ ಢಿಕ್ಕಿ: ಯುವಕ ಮೃತ್ಯು

Must read

ಉಡುಪಿ: ಸ್ಕೂಟರ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಪಡುಬಿದ್ರಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭಾನುವಾರ ರಾತ್ರಿ ನಡೆದಿದೆ.


ಮೃತ ಸವಾರನನ್ನು ಪಲಿಮಾರು ದರ್ಕಾಸ್ತು ನಿವಾಸಿ ಧನ್ ರಾಜ್ ಪಲಿಮಾರು (17) ಎಂದು ಗುರುತಿಸಲಾಗಿದೆ. ಇವರು ನಿನ್ನೆ ರಾತ್ರಿ ಸ್ನೇಹಿತನೊಂದಿಗೆ ಸ್ಕೂಟರ್ ನಲ್ಲಿ ಎರ್ಮಾಳಿನ ಪೂಂದಾಡು ಎಂಬಲ್ಲಿಗೆ ನಾಟಕ ನೋಡಲು ತೆರಳುತ್ತಿದ್ದರು. ಈ ವೇಳೆ ಬೆಂಗಳೂರಿಗೆ ತೆರಳುತ್ತಿದ್ದ ಬಸ್ಸೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ.

ಇದರ ಪರಿಣಾಮ ಇಬ್ಬರು ರಸ್ತೆಗೆ ಉರುಳಿಬಿದ್ದಿದ್ದು, ಧನ್ ರಾಜ್ ಗಂಭೀರವಾಗಿ ಗಾಯಗೊಂಡಿದ್ದರು. ಮುಕ್ಕದ ಆಸ್ಪತ್ರೆಗೆ ಕೊಂಡೊಯ್ಯುವ ದಾರಿ ಮಧ್ಯೆ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಸ್ನೇಹಿತ ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾನೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

spot_img

More articles

LEAVE A REPLY

Please enter your comment!
Please enter your name here