Friday, September 20, 2024

ಉಡುಪಿ ನಗರಸಭೆ ದ್ರವ ಹಾಗೂ ಘನ ತ್ಯಾಜ್ಯ ನಿರ್ವಹಣೆ ಮೇಲ್ದರ್ಜೆಗೇರಿಸಲು ಕೇಂದ್ರ ಸರ್ಕಾರದಿಂದ 47.50 ಕೋಟಿ ಅನುದಾನ ಮಂಜೂರು: ಶಾಸಕ ಯಶ್ ಪಾಲ್ ಸುವರ್ಣ

Must read

ಉಡುಪಿ: ನಗರಸಭೆ ವ್ಯಾಪ್ತಿಯ ದ್ರವ ಹಾಗೂ ಘನ ತ್ಯಾಜ್ಯ ನಿರ್ವಹಣೆ ಮೇಲ್ದರ್ಜೆಗೇರಿಸಲು ಕೇಂದ್ರ ಸರ್ಕಾರದಿಂದ 47.50 ಕೋಟಿ ಅನುದಾನ ಮಂಜೂರು ಮಾಡಿದ ಶ್ರೀ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರಕ್ಕೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅಭಿನಂದನೆ ಸಲ್ಲಿಸಿದ್ದಾರೆ.

ಉಡುಪಿ ನಗರಸಭೆ ವ್ಯಾಪ್ತಿಯ ದ್ರವ ತ್ಯಾಜ್ಯ ನಿರ್ವಹಣೆ ಮೇಲ್ದರ್ಜೆಗೇರಿಸಲು ಎನ್ ಜಿ ಟಿ ಮೂಲಕ ರೂ. 30 ಕೋಟಿ ಹಾಗೂ ಘನ ತ್ಯಾಜ್ಯ ವೈಜ್ಞಾನಿಕವಾಗಿ ನಿರ್ವಹಿಸಲು ರೂ. 13 ಕೋಟಿಗಳ ಪ್ರಸ್ತಾವನೆಗೆ ಅನುಮತಿ ನೀಡಿ ಮಂಜೂರಾತಿ ನೀಡಿದೆ ಹಾಗೂ ಘನ ತ್ಯಾಜ್ಯ ನಿರ್ವಹಣಾ ಎಂ.ಆರ್‌.ಎಫ್. ಘಟಕ ಸ್ಥಾಪನೆಗೆ ರೂ. 4.5 ಕೋಟಿ ರೂಪಾಯಿ ಮಂಜೂರುಗೊಳಿಸುವ ಮೂಲಕ ನಗರದ ತ್ಯಾಜ್ಯಗಳನ್ನು ವೈಜ್ಞಾನಿಕ ವಿಲೇವಾರಿಗೆ ಹೆಚ್ಚಿನ ವೇಗ ತುಂಬಲಿದೆ.

ಕೇಂದ್ರ ಸರ್ಕಾರದ ಮೂಲಕ ಈ ಗರಿಷ್ಠ ಅನುದಾನ ಮಂಜೂರಿಗೆ ವಿಶೇಷ ಮುತುವರ್ಜಿ ವಹಿಸಿದ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಯವರಿಗೆ ಉಡುಪಿ ಜನತೆಯ ಪರವಾಗಿ ಧನ್ಯವಾದ ಸಲ್ಲಿಸುವುದಾಗಿ ತಿಳಿಸಿದ್ದಾರೆ.

spot_img

More articles

LEAVE A REPLY

Please enter your comment!
Please enter your name here