Tuesday, September 17, 2024

ಜ್ಞಾನವಾಪಿ ಮಸೀದಿಯಲ್ಲಿ ಹಿಂದೂಗಳಿಗೆ ಪೂಜೆ ನಡೆಸಲು ಅವಕಾಶ ನೀಡಿದ ಕೋರ್ಟ್

Must read

ಲಖನೌ: ಜ್ಞಾನವಾಪಿ ಮಸೀದಿ ನೆಲಮಾಳಿಗೆಯಲ್ಲಿ ಹಿಂದೂಗಳಿಗೆ ಪೂಜೆ ಮಾಡಲು ವಾರಣಾಸಿ ಕೋರ್ಟ್ ಅವಕಾಶ ನೀಡಿದ್ದು, ಆ ಮೂಲಕ‌ ಹಿಂದೂಗಳ ಪಾಲಿಗೆ ದೊಡ್ಡ ಜಯ ಸಿಕ್ಕಿದಂತಾಗಿದೆ.

ಏಳು ದಿನಗಳೊಳಗೆ ಪೂಜೆಗೆ ವ್ಯವಸ್ಥೆ ಮಾಡುವಂತೆ ನ್ಯಾಯಾಲಯವು ಸೂಚಿಸಿದೆ. ಹಿಂದೂಗಳು ಪೂಜೆ ಮಾಡಲು ಸೂಕ್ತ ವ್ಯವಸ್ಥೆ ಮಾಡುವಂತೆ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ನ್ಯಾಯಾಲಯ ಆದೇಶಿಸಿದೆ.
ಕಳೆದ ವಾರ ನ್ಯಾಯಾಲಯದ ಆದೇಶದ ಮೇರೆಗೆ ಡಿಎಂ ಜ್ಞಾನವಾಪಿ ನೆಲಮಾಳಿಗೆಯ ಕೀಗಳನ್ನು ಸ್ವಾಧೀನಪಡಿಸಿಕೊಂಡಿದ್ದರು.

1993ಕ್ಕೂ ಮೊದಲು ಈ ನೆಲಮಾಳಿಗೆಯಲ್ಲಿ ಪೂಜಾ ಕಾರ್ಯಗಳು ನಡೆಯುತ್ತಿದ್ದವು. ಅಯೋಧ್ಯೆಯ ವಿವಾದಿತ ಕಟ್ಟಡದ ಕುಸಿತದ ನಂತರ, ಜಿಲ್ಲಾಡಳಿತ ಜ್ಞಾನವಾಪಿ ಸುತ್ತಲೂ ಕಬ್ಬಿಣದ ಸರಳುಗಳನ್ನು ಅಳವಡಿಸಿದ್ದರು.

spot_img

More articles

LEAVE A REPLY

Please enter your comment!
Please enter your name here