Friday, September 20, 2024

ಬಿಜೆಪಿ ಹಿರಿಯ ನಾಯಕ ಸೋಮಶೇಖರ ಭಟ್ ಅಂತ್ಯಕ್ರಿಯೆ: ರಾಜಕೀಯ ಮುಖಂಡರು ಗಣ್ಯರಿಂದ ಅಂತಿಮ ದರ್ಶನ

Must read

ಉಡುಪಿ: ಬಿಜೆಪಿ ಹಿರಿಯ ನಾಯಕ, ಆರ್.ಎಸ್.ಎಸ್ ಮುಂದಾಳು, ಉಡುಪಿ ನಗರಸಭೆಯ ಮಾಜಿ ಅಧ್ಯಕ್ಷ ಸೋಮಶೇಖರ ಭಟ್ ಅವರ ಅಂತಿಮ ದರ್ಶನ ಇಂದು ಮಧ್ಯಾಹ್ನ ಕಾಡುಬೆಟ್ಟುವಿನ ಅವರ ನಿವಾಸ ‘ನಲಂದ’ದಲ್ಲಿ ನಡೆಯಿತು. ಬಳಿಕ ಉಡುಪಿ ಬೀಡಿನಗುಡ್ಡೆ ಹಿಂದೂ ರುದ್ರ ಭೂಮಿಯಲ್ಲಿ ಅಂತ್ಯ ಸಂಸ್ಕಾರದ ವಿಧಿ ವಿಧಾನಗಳು ಜರಗಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಪ್ರಚಾರಕ ದಾ.ಮ. ರವೀಂದ್ರ, ಮಾನ್ಯ ವಿಭಾಗ ಸಂಘ ಚಾಲಕ ನಾರಾಯಣ ಶೆಣೈ ಸಹಿತ ಸಂಘ ಪ್ರಮುಖರು, ಮಾಜಿ ಶಾಸಕರುಗಳಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಲಾಲಾಜಿ ಆರ್. ಮೆಂಡನ್, ಭಜರಂಗದಳದ ಪ್ರಮುಖರಾದ ಸುನಿಲ್ ಕೆ.ಆರ್., ದಿನೇಶ್ ಮೆಂಡನ್ ಸಹಿತ ಬಿಜೆಪಿ ಮುಖಂಡರು, ವಿವಿಧ ಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಹಿತೈಷಿ-ಅಭಿಮಾನಿಗಳು ನೂರಾರು ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

spot_img

More articles

LEAVE A REPLY

Please enter your comment!
Please enter your name here