Thursday, September 19, 2024

ಪುತ್ತಿಗೆ ಪರ್ಯಾಯದ ಕೋಟಿ ಗೀತಾ ಲೇಖನ ಯಜ್ಞ ಕಾರ್ಯಕ್ರಮ: ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಆಹ್ವಾನ

Must read

ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ತಮ್ಮ ಚತುರ್ಥ ಕೃಷ್ಣಪೂಜಾ ಪರ್ಯಾಯದ ಅವಧಿಯಲ್ಲಿ ಸಂಕಲ್ಪಿಸಿರುವ ಕೋಟಿ ಗೀತಾ ಲೇಖನ ಯಜ್ಞದ ಮೊದಲ ಹಂತದಲ್ಲಿ ನಡೆಯುವ ಲಕ್ಷ ಗೀತಾ ಲೇಖನಗಳ ಸಮರ್ಪಣಾ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಉತ್ತರಪ್ರದೇಶ ಮುಖ್ಯ ಮಂತ್ರಿಯೋಗಿ ಆದಿತ್ಯನಾಥ್ ಅವರಿಗೆ ಆಹ್ವಾನ ನೀಡಲಾಯಿತು.

ಪುತ್ತಿಗೆ ಶ್ರೀಗಳ ಸೂಚನೆಯಂತೆ ಪರ್ಯಾಯ ಸಮಿತಿ ಕಾರ್ಯಾಧ್ಯಕ್ಷ ಮಾಜಿ ಶಾಸಕ ಕೆ ರಘುಪತಿ ಭಟ್ ಅವರು ಮಂಗಳವಾರ ಲಕ್ನೋದಲ್ಲಿ ಸಿಎಂ ಯೋಗಿ ಅವರನ್ನು ಭೇಟಿ ಮಾಡಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ವಿನಂತಿಸಿದರು.

ಈ ಸಂದರ್ಭದಲ್ಲಿ ಸಿಎಂ ಯೋಗಿ ಅವರು ಶ್ರೀಗಳೊಂದಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಕೋಟಿಗೀತಾ ಲೇಖನ ಯಜ್ಞವನ್ನು ಮುಕ್ತವಾಗಿ ಪ್ರಶಂಸಿಸಿ ತಮ್ಮನ್ನು ಆಹ್ವಾನಿಸಿರುವುದಕ್ಕೆ ಕೃತಜ್ಞತೆ ಸಲ್ಲಿಸಿದರು.
ಪೇಜಾವರ ಶ್ರೀಗಳ ಆಪ್ತರಾದ ವಾಸುದೇವ ಭಟ್ ಪೆರಂಪಳ್ಳಿ , ಬಿಜೆಪಿ ಪ್ರಮುಖರಾದ ಮಹೇಶ್ ಠಾಕೂರ್ , ಸುವರ್ಧನ್ ನಾಯಕ್ ಉಪಸ್ಥಿತರಿದ್ದರು .

spot_img

More articles

LEAVE A REPLY

Please enter your comment!
Please enter your name here