Saturday, September 21, 2024

ಪರಶುರಾಮ ಥೀಮ್ ಪಾರ್ಕ್ ಹಗರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿ ಸಿಎಂ ಆದೇಶ

Must read

ಬೆಂಗಳೂರು: ಬೈಲೂರು ಪರಶುರಾಮ ಥೀಮ್ ಪಾರ್ಕ್ ಹಗರಣವನ್ನು ಸಿಐಡಿ ತನಿಖೆ ಆದೇಶಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

ಥೀಮ್ ಪಾರ್ಕ್ ನಲ್ಲಿ ಪ್ರತಿಷ್ಠಾಪಿಸಿರುವ ಪರಶುರಾಮ ವಿಗ್ರಹ ಕಾಮಗಾರಿಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂದು ವಿವಿಧ ದೃಶ್ಯ ಮಾಧ್ಯಮ ಮತ್ತು ದಿನ ಪತ್ರಿಕೆಗಳು ವರದಿ ಬಂದಿದ್ದು, ಈ ಬಗ್ಗೆ ಸಮಗ್ರ ತನಿಖೆಗೆ ಆಗ್ರಹಿಸಿ ಹಲವು ಸಾಮಾಜಿಕ ಕಾರ್ಯಕರ್ತರು, ರಾಜಕೀಯ ಮುಖಂಡರು ದೂರು ನೀಡಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಸಿಎಂಗೆ ಪತ್ರ ಬರೆದಿದ್ದರು.

ಇದನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಐಡಿ ತನಿಖೆಗೆ ಆದೇಶಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

spot_img

More articles

LEAVE A REPLY

Please enter your comment!
Please enter your name here