Friday, September 20, 2024

ಉಡುಪಿ: ಫೆ.24ರಂದು ಎಸ್ ಡಿಎಂ‌ ಕಾಲೇಜಿನಲ್ಲಿ ‘ಅಗ್ನಿ ಮಂಥನ-2024’ ರಾಷ್ಟ್ರೀಯ ಸಮ್ಮೇಳನ

Must read

ಉಡುಪಿ: ಕುತ್ಪಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯದ ಶರೀರ ಕ್ರಿಯಾ ವಿಭಾಗದ ವತಿಯಿಂದ ಫೆ. 24ರಂದು ‘ಅಗ್ನಿ ಮಂಥನ-2024’ ಎಂಬ ಒಂದು ದಿನದ ರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ರವಿ ಭಟ್ ತಿಳಿಸಿದರು.

ಉಡುಪಿಯಲ್ಲಿಂದ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಲೇಜಿನ ಶ್ರೀ ಧರ್ಮಸ್ಥಳ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಸ್ಮಾರಕ ಭವನದ ‘ಭಾವಪ್ರಕಾಶ’ ಸಭಾಂಗಣದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ 9.15ಕ್ಕೆ ಆಯುಷ್ ಕಮಿಷನರ್ ಡಾ. ಶ್ರೀನಿವಾಸಲು ಕೆ. ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಆಯುಷ್ ನ‌ ಪ್ರೊಜೆಕ್ಟ್ ಹೆಡ್ ಡಾ. ಅನಂತ ದೇಸಾಯಿ, ಜಿಲ್ಲಾ ಆಯುಷ್ ಅಧಿಕಾರಿ ಸತೀಶ್ ಆಚಾರ್ಯ ಉಡುಪಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಪ್ರಾಂಶುಪಾಲೆ ಡಾ. ಮಮತಾ ಕೆ.ವಿ. ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ಸಮ್ಮೇಳನದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ವೈದ್ಯ ಉಪೇಂದ್ರ ದೀಕ್ಷಿತ್, ರಾಷ್ಟ್ರೀಯ ಆಯುರ್ವೇದ ಗುರು, ನವದೆಹಲಿ, ಡಾ. ಅನಂತ ಲಕ್ಷ್ಮಿ’ ಪ್ರಾಧ್ಯಾಪಕರು, ಶರೀರ ಕ್ರಿಯಾ ವಿಭಾಗ, ಸರಕಾರಿ ಆಯುರ್ವೇದ ಕಾಲೇಜು, ಕಣ್ಣೂರು ಹಾಗೂ ಡಾ. ಪ್ರಸನ್ನ ಎನ್. ಮೊಗಸಾಲೆ, ಸಹಪ್ರಾಧ್ಯಾಪಕರು, ರೋಗನಿದಾನ ವಿಭಾಗ, ಎಸ್.ಡಿ.ಎಮ್. ಆಯುರ್ವೇದ ಕಾಲೇಜು, ಉಡುಪಿ ಇವರು ಭಾಗವಹಿಸಲಿದ್ದಾರೆ.

ಸಂಸ್ಥೆಯ ಅಧ್ಯಕ್ಷರಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ಕಾಲೇಜಿನ ಶರೀರ ಕ್ರಿಯಾ ವಿಭಾಗದಿಂದ ಈ ಸಮ್ಮೇಳನವನ್ನು ಆಯೋಜಿಸಲಾಗಿದೆ. ಈ ಸಮ್ಮೇಳನವು ಸಂಸ್ಥೆಯ ಹಿರಿಯ ಮಾರ್ಗದರ್ಶಕರಾಗಿದ್ದ ದಿವಂಗತ ಶ್ರೀ ಧರ್ಮಸ್ಥಳ ಮಾತೃಶ್ರೀ ರತ್ನಮ್ಮ ಹೆಗ್ಗಡೆಯವರ ಜನ್ಮದಿನದ ಸಂಸ್ಮರಣಾರ್ಥವಾಗಿ ಪ್ರತಿವರ್ಷ ಆಚರಿಸಲ್ಪಡುತ್ತಿದೆ ಎಂದು ಮಾಹಿತಿ ನೀಡಿದರು.

ಸೇವಿಸಿದ ಆಹಾರದ ಪಚನಕ್ರಿಯೆ ಹಾಗೂ ತನ್ಮೂಲಕ ಶರೀರ ಪೋಷಣೆಯ ಕುರಿತು ದೀರ್ಘ ಸಮಾಲೋಚನೆ ನಡೆಯಲಿದೆ. ರಾಷ್ಟ್ರಾದ್ಯಂತ ವಿವಿಧ ಸಂಸ್ಥೆಗಳಿಂದ 500 ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಆಗಮಿಸಲಿದ್ದು, ಸುಮಾರು 250 ಕ್ಕೂ ಅಧಿಕ ಪ್ರಬಂಧಗಳು ಮಂಡನೆಯಾಗಲಿವೆ.

ಸಮಾರೋಪ ಸಮಾರಂಭವು ಅಂದು ಸಂಜೆ 4.30ಕ್ಕೆ ನಡೆಯಲಿದ್ದು, ಎಸ್.ಡಿಎಮ್. ಆಯುರ್ವೇದ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ನಾಗರಾಜ್ ಎಸ್. ಉಡುಪಿ ಅಧ್ಯಕ್ಷತೆ ವಹಿಸಲಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಡಾ. ಅಶೋಕ್ ಕುಮಾರ್ ಬಿ.ಎನ್ , ಡಾ. ವೀರಕುಮಾರ್, ಡಾ. ಎಸ್.ಆರ್ ಮೋರೆ, ಡಾ. ಶ್ರೀನಿಧಿ ಬಲ್ಲಾಳ್, ಡಾ. ಅಪರ್ಣ ಕೆ ಉಪಸ್ಥಿತರಿದ್ದರು.

spot_img

More articles

LEAVE A REPLY

Please enter your comment!
Please enter your name here