Friday, September 20, 2024

ಉಡುಪಿ: ಮತಾಂತರ ಮಾಡಲು ಬಂದವರನ್ನು ಅಟ್ಟಾಡಿಸಿಕೊಂಡು ಹೋಗಿ ಓಡಿಸಿದ್ರು!

Must read

ಉಡುಪಿ: ಮತಾಂತರ ಮಾಡಲಾಗುತ್ತದೆ ಎಂಬ ಸುದ್ದಿ ಕರಾವಳಿಯಾದ್ಯಂತ ಆಗಾಗ ಸದ್ದು ಮಾಡುತ್ತಿರುತ್ತದೆ. ಇದಕ್ಕೆ ಸಾಕ್ಷಿ ಎಂಬಂತೆ ಘಟನೆಯೊಂದು ನಡೆದಿದ್ದು ಸಾಮಾಜಿಕ ಜಾಲತಾಣದಲ್ಲಿ ಈ ಕುರಿತ ವಿಡಿಯೋ ವೈರಲ್ ಆಗುತ್ತಿದೆ.
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು ಉಪ್ಪಿನಕೋಟೆ ಬಳಿ ಈ ಘಟನೆ ಸಂಭವಿಸಿದೆ.

ತಮ್ಮ ಧರ್ಮದ ಪ್ರಚಾರಕ್ಕಾಗಿ ಇಬ್ಬರು ಮಹಿಳೆಯರು ಬ್ರಹ್ಮಾವರ ಸಮೀಪದ ಉಪ್ಪಿನಕೋಟೆಗೆ ಬಂದಿದ್ದರು. ತಮ್ಮ ಧರ್ಮದ ಕುರಿತು ಸ್ಥಳೀಯರಿಗೆ ಮಾಹಿತಿ ನೀಡುತ್ತಿದ್ದ ಸಂದರ್ಭ ಕೋಪಗೊಂಡ ಸ್ಥಳೀಯನೊಬ್ಬ ,ಮತಾಂತರ ಮಾಡಲು ಬಂದಿದ್ದೀರ ? ಎಂದು ಅಕ್ರೋಶ ವ್ಯಕ್ತಪಡಿಸಿ ಆವಾಜ್ ಹಾಕಿದ್ದಾರೆ. ಬಳಿಕ ದೊಣ್ಣೆ ಹಿಡಿದು ಅಟ್ಟಾಡಿಸಿಕೊಂಡು ಹೋಗಿದ್ದಾರೆ.

ಇನ್ನೊಮ್ಮೆ ಈ ಭಾಗಕ್ಕೆ ಬಂದರೆ ಜಾಗ್ರತೆ ಎಂದು ಗದರಿಸಿ ಅವರನ್ನು ಓಡಿಸಿದ್ದಾರೆ. ಬಂದ ದಾರಿಗೆ ಸುಂಕ ಇಲ್ಲ ಎಂಬಂತೆ ಮತಾಂತರಕ್ಕೆ ಬಂದವರು ಅಲ್ಲಿಂದ ಕಾಲ್ಕಿತ್ತಿದ್ದಾರೆ. ಸದ್ಯ ಈ ವಿಡಿಯೊ
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

spot_img

More articles

LEAVE A REPLY

Please enter your comment!
Please enter your name here