Thursday, September 19, 2024

ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡದಂತೆ ಕಾರ್ಯಕರ್ತರ ಒತ್ತಾಯ: ಬೀದಿಗೆ ಬಂದ ‘ಗೋ ಬ್ಯಾಕ್’ ಚಳವಳಿ

Must read

ಚಿಕ್ಕಮಗಳೂರು: ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಗೋ ಬ್ಯಾಕ್‌ ಚಳವಳಿ ತೀವ್ರಗೊಂಡಿದ್ದು, ಕಾರ್ಯಕರ್ತರು ಪಕ್ಷದ ಕಚೇರಿ ಗದ್ದಲ ಎಬ್ಬಿಸಿ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲೆಯ ಈವರೆಗೆ ಪತ್ರ ಚಳವಳಿ, ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿದ್ದ ‘ಗೋ ಬ್ಯಾಕ್’ ಚಳವಳಿ ಈಗ ಬೀದಿಗೆ ಬಂದಿದೆ. ಶಾಸಕ ಆರಗ ಜ್ಞಾನೇಂದ್ರ, ಮುಖಂಡ ಭಾನು ಪ್ರಕಾಶ್ ಸೇರಿ ಹಲವು ಮುಖಂಡರ ನೇತೃತ್ವದಲ್ಲಿ ಚುನಾವಣಾ ನಿರ್ವಹಣಾ ಸಮಿತಿ ಸಭೆ ಭಾನುವಾರ ನಡೆಯುತ್ತಿತ್ತು.

ಈ ವೇಳೆ ವೇದಿಕೆ ಬಳಿಗೆ ಬಂದ ಕಾರ್ಯಕರ್ತರು, ‘ಶೋಭಾ ಕರಂದ್ಲಾಜೆ ಅವರನ್ನು ಅಭ್ಯರ್ಥಿ ಮಾಡಬಾರದು. ಚಿಕ್ಕಮಗಳೂರು ಜಿಲ್ಲೆಯವರಿಗೇ ಟಿಕೆಟ್‌ ನೀಡಬೇಕು. ಹತ್ತು ವರ್ಷಗಳಿಂದ ಸಂಸದೆಯಾಗಿರುವ ಶೋಭಾ ಅವರಿಗೆ ಪಕ್ಷದ ಬ್ಲಾಕ್ ಸಮಿತಿ ಮುಖಂಡರ ಪರಿಚಯವೇ ಇಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

spot_img

More articles

LEAVE A REPLY

Please enter your comment!
Please enter your name here