Tuesday, September 17, 2024

ದೇವತಾ ಸೇವೆಯ ಮೂಲಕ ಸಮಾಜ, ದೇಶದ ಸೇವೆ – ಪೇಜಾವರ ಶ್ರೀ

Must read

ಉಡುಪಿ: ಊರವರೆಲ್ಲರೂ ಸೇರಿ ನಡೆಸುವ ದೇವತಾ ಸೇವೆಯಿಂದ ಊರು ಸುಭಿಕ್ಷವಾಗುತ್ತದೆ, ಈ ಮೂಲಕ ದೇಶ ಸುಭಿಕ್ಷವಾಗುತ್ತದೆ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಹೇಳಿದರು.

ಶ್ರೀ ಕ್ಷೇತ್ರ ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ – ಶ್ರೀ ಮಹಾಗಣಪತಿ ದೇವರ ನೂತನ ದೇವಳದ ಸಮರ್ಪಣೆ, ಪುನಃಪ್ರತಿಷ್ಠೆ, ಸಹಸ್ರಕಲಶ ಬ್ರಹ್ಮಕುಂಭಾಭಿಷೇಕಕ್ಕೆ ಪೂರ್ವಬಾವಿಯಾಗಿ ನಡೆದ ಹೊರೆಕಾಣಿಕೆಯ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.

ಊರವರು ನಡೆಸಿದ ಈ ಭವ್ಯ ಹೊರೆಕಾಣಿಕೆ ಮೆರವಣಿಗೆಯನ್ನು ನೋಡಿದಾಗ ಅವರ ಭಕ್ತಿಶ್ರದ್ಧೆಗಳು ಕಾಣುತ್ತಿವೆ. ಅನ್ನದಾನಕ್ಕೆ ಪೂರಕವಾಗಿ ನಡೆದ ಈ ಹೊರೆಕಾಣಿಕೆಯನ್ನು ತಂದೊಪ್ಪಿಸಿದ ಪ್ರತಿಯೊಬ್ಬರ ಮನೆಯಲ್ಲಿ ಅನ್ನಕ್ಕೆ ಕೊರತೆಯಾಗುವುದಿಲ್ಲ ಎಂದ ಶ್ರೀಗಳು ಎಲ್ಲರಿಗೂ ಕ್ಷೇತ್ರಾಧಿಪತಿ ದೇವತೆಗಳು, ಉಡುಪಿ ಶ್ರೀಕೃಷ್ಣ ಮುಖ್ಯಪ್ರಾಣ ಮತ್ತು ವಿಶೇಷವಾಗಿ ಆಯೋಧ್ಯೆ ಬಾಲರಾಮನ ಅನುಗ್ರಹವನ್ನು ಪ್ರಾರ್ಥಿಸುತ್ತೇವೆ ಎಂದರು.

spot_img

More articles

LEAVE A REPLY

Please enter your comment!
Please enter your name here