Saturday, July 27, 2024

ಉಡುಪಿ: ಜೈಲಿನಲ್ಲೇ ಹೃದಯಾಘಾತ; ವಿಚಾರಣಾಧೀನ ಕೈದಿ ಮೃತ್ಯು

Must read

ಉಡುಪಿ: ವಿಚಾರಣಾಧೀನ ಕೈದಿಯೋರ್ವ ಜೈಲಿನಲ್ಲೇ ಹೃದಯಾಘಾತ ಸಂಭವಿಸಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಹಿರಿಯಡಕ ಸಬ್ ಜೈಲಿನಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಕೊಲೆ ಆರೋಪಿ ಅನೂಪ್ ಶೆಟ್ಟಿ (38)ಎಂದು ಗುರುತಿಸಲಾಗಿದೆ. ಈತ ಕುಂದಾಪುರದ ಫೈನಾನ್ಶಿಯರ್ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದನು. ಕಳೆದ ಎರಡೂವರೆ ವರ್ಷಗಳಿಂದ ವಿಚಾರಣಾಧೀನ ಕೈದಿಯಾಗಿ ಜೈಲಿನಲ್ಲಿದ್ದನು.

ಶನಿವಾರ ಸಂಜೆ ವೇಳೆ ಈತನಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದ್ದು, ಮಾಹಿತಿ ತಿಳಿದ ತಕ್ಷಣ ಸಿಬ್ಬಂದಿ ಆಸ್ಪತ್ರೆಗೆ ರವಾನಿಸಿದ್ದರು. ಆದರೆ, ಆಸ್ಪತ್ರೆಗೆ ದಾಖಲಾಗುವ ಮೊದಲೇ ಆರೋಪಿ ಕೊನೆಯುಸಿರೆಳೆದಿದ್ದಾನೆ ಎಂದು ಉಡುಪಿ ಎಸ್ಪಿ ಡಾ. ಅರುಣ್ ಕುಮಾರ್ ಮಾಹಿತಿ ನೀಡಿದ್ದಾರೆ.

spot_img

More articles

LEAVE A REPLY

Please enter your comment!
Please enter your name here