Sunday, September 8, 2024

ವಿಧಾನ ಪರಿಷತ್ ಚುನಾವಣೆ: ಬಿಜೆಪಿಯಿಂದ ಮೂರು ಅಭ್ಯರ್ಥಿಗಳ ಘೋಷಣೆ

Must read

ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್ ಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಮೂರು ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದೆ. ವಿಧಾನಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆಯೇ ಕೊನೆಯ ದಿನವಾಗಿದೆ. ಹೀಗಾಗಿ ಇಂದು ಬಿಜೆಪಿ ಹೈಕಮಾಂಡ್ ಅಂತಿಮವಾಗಿ ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ.

ವಿಧಾನಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಹೈಕಮಾಂಡ್ ಕೊನೆಗೂ ಮಾಜಿ ಸಚಿವ ಸಿ.ಟಿ ರವಿ, ಎನ್. ರವಿಕುಮಾರ್ ಮತ್ತು ಎಂ.ಜಿ ಮೂಳೆ ಅವರಿಗೆ ಮಣೆ ಹಾಕಿದೆ. ಎಂಎಲ್‌ಸಿ ಚುನಾವಣೆಗೆ ಸಾಕಷ್ಟು ಮಂದಿಯ ಹೆಸರು ಕೇಳಿ ಬಂದರು ಅಂತಿಮವಾಗಿ ಬಿಜೆಪಿ ವರಿಷ್ಠರು ಮೂವರ ಹೆಸರು ಅಂತಿಮಗೊಳಿಸಿದ್ದಾರೆ.

ಮೂರು ಸ್ಥಾನಗಳಲ್ಲಿ ಒಕ್ಕಲಿಗ ಸಮುದಾಯದಿಂದ ಸಿ.ಟಿ ರವಿ, ಒಬಿಸಿ ವರ್ಗದಲ್ಲಿ ಎನ್‌. ರವಿಕುಮಾರ್ ಹಾಗೂ ಎಂ.ಜಿ ಮುಳೆ ಅವರಿಗೆ ಸ್ಥಾನ ನೀಡಲಾಗಿದೆ. ಎಂ.ಜಿ ಮೂಳೆ ಅವರು ಬಸವ ಕಲ್ಯಾಣ ಕ್ಷೇತ್ರದ ಮಾಜಿ ಶಾಸಕ ಮತ್ತು ಮರಾಠಾ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರು ಆಗಿದ್ದರು. ಮೂಳೆ ಅವರು ಈ ಮೊದಲು ಜೆಡಿಎಸ್‌ನಲ್ಲಿದ್ದು, ಕಳೆದ ಉಪಚುನಾವಣೆಯಲ್ಲಿ ಬಿಜೆಪಿ ಸೇರಿದ್ದರು.

spot_img

More articles

LEAVE A REPLY

Please enter your comment!
Please enter your name here