Friday, October 18, 2024

ಶಂಕರನಾರಾಯಣ: ಗೋ ಕಳ್ಳತನ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Must read

ಉಡುಪಿ: ಶಂಕರನಾರಾಯಣ ಪೇಟೆಯಲ್ಲಿ ನಡೆದ ಗೋ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು ಆಸೈಗೋಳಿ ನಿವಾಸಿಗಳಾದ ನಿಜಾಮುದ್ದೀನ್ ಎ.ಎಚ್ ಹಾಗೂ ಮಹಮ್ಮದ್ ಅನ್ಸಾರ್ ಬಂಧಿತ ಆರೋಪಿಗಳು. ಜೂನ್ 25ರಂದು ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಶಂಕರನಾರಾಯಣ ಪೇಟೆಯಲ್ಲಿ ಗೋಕಳ್ಳತನ ನಡೆದಿತ್ತು.

ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿದ ಶಂಕರನಾರಾಯಣ ಪೊಲೀಸರು, ಜೂನ್ 29ರಂದು ಇಬ್ಬರು ಆರೋಪಿಗಳನ್ನು ಬಂಧಿಸಿ, ಕೃತ್ಯಕ್ಕೆ ಬಳಸಿದ್ದ ಕಾರನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಬಳಿಕ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗಳಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

spot_img

More articles

LEAVE A REPLY

Please enter your comment!
Please enter your name here