Friday, October 18, 2024

ಕುಂದಾಪುರ: ಸಕ್ಕರೆ ತುಂಬಿದ ಲಾರಿ ಪಟ್ಟಿ; ಚಾಲಕ ಅಪಾಯದಿಂದ ಪಾರು

Must read

ಉಡುಪಿ: ಸಕ್ಕರೆ ತುಂಬಿಕೊಂಡು ಕೇರಳಕ್ಕೆ ತೆರಳುತ್ತಿದ್ದ ಲಾರಿಯೊಂದು ಚಾಲಕ ನಿಯಂತ್ರಣ ತಪ್ಪಿ ಇನ್ನೊಂದು ಲಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಕುಂದಾಪುರ ತಾಲೂಕಿನ ಮಲ್ಲಿಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬೆಳಿಗ್ಗೆ 7ಗಂಟೆಗೆ ಸಂಭವಿಸಿದೆ.

ಲಾರಿಯು ಸೋಲಾಪುರದಲ್ಲಿ ಸಕ್ಕರೆ ತುಂಬಿಕೊಂಡು ಕೇರಳಕ್ಕೆ ತೆರಳುತ್ತಿತ್ತು. ಮಲ್ಲಿಕಟ್ಟೆ ಜಂಕ್ಷನ್ ನಲ್ಲಿ ಎದುರಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ‌ ಹೊಡೆಯುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡ ಲಾರಿಯು ಇನ್ನೊಂದು ಲಾರಿಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಚಾಲಕ ಅಪಾಯದಿಂದ ಪಾರಾಗಿದ್ದು, ಹೆದ್ದಾರಿಯಲ್ಲಿ ಸಂಚಾರವು ಕೆಲಹೊತ್ತು ಅಸ್ತವ್ಯಸ್ತಗೊಂಡಿತು. ಗಂಗೊಳ್ಳಿ ಪೊಲೀಸರು ಹಾಗೂ ಹೆದ್ದಾರಿ ಗಸ್ತು ಸಿಬ್ಬಂದಿ ಸ್ಥಳಕ್ಕೆ ಬಂದು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

spot_img

More articles

LEAVE A REPLY

Please enter your comment!
Please enter your name here