Sunday, February 16, 2025

ಮಂಗಳೂರು: ಮಸಾಜ್ ಪಾರ್ಲರ್ ಮೇಲೆ ಹಿಂದೂ ಸಂಘಟನೆಯ ಕಾರ್ಯಕರ್ತರಿಂದ ದಾಳಿ

Must read

ಮಂಗಳೂರು: ನಗರದ ಬಿಜೈ ಕೆಎಸ್ಆರ್‌ಟಿಸಿ ಬಳಿ‌ ಕಾರ್ಯಾಚರಿಸುತ್ತಿದ್ದ ಮಸಾಜ್ ಸೆಂಟರ್‌ಗೆ ರಾಮ್ ಸೇನಾ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ದಾಳಿ ನಡೆಸಿ, ಪಾರ್ಲರ್​​ನ ಗಾಜು, ಪೀಠೋಪಕರಣ ಧ್ವಂಸ ಮಾಡಿರುವ ಘಟನೆ ಗುರುವಾರ ನಡೆದಿದೆ.

ಪ್ರಸಾದ್ ಅತ್ತಾವರ ನೇತೃತ್ವದ ಸಂಘಟನೆಯ ಹತ್ತು ಜನ ಕಾರ್ಯಕರ್ತರು ಬಿಜೈ ಕೆಎಸ್‍ಆರ್‍ ಟಿಸಿ ಬಳಿಯ ಕಲರ್ಸ್ ಯೂನಿಸೆಕ್ಸ್ ಸೆಲೂನ್ ಮೇಲೆ ದಾಳಿ ನಡೆಸಿದ್ದಾರೆ.

ಸೆಲೂನ್‍ನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂದು ಕಾರ್ಯಕರ್ತರು ಆರೋಪಿಸಿದ್ದಾರೆ. ದಾಳಿ ವೇಳೆ, ನಾಲ್ಕು ಜನ ಯುವತಿಯರು ಹಾಗೂ ಓರ್ವ ವ್ಯಕ್ತಿ ಸೆಲೂನ್‍ನಲ್ಲಿ ಇದ್ದರು. ಈ ವೇಳೆ ವ್ಯಕ್ತಿಯ ಮೇಲೆ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಅಲ್ಲದೇ ಪೀಠೋಪಕರಣ ಧ್ವಂಸ ಮಾಡಿದ್ದಾರೆ. ನಗರದಾದ್ಯಂತ ಇರುವ ಮಸಾಜ್ ಸೆಂಟರ್‍ ಗಳನ್ನು ಮುಚ್ಚುವಂತೆ ಕಾರ್ಯಕರ್ತರು ಆಗ್ರಹಿಸಿದ್ದಾರೆ.

spot_img

More articles

LEAVE A REPLY

Please enter your comment!
Please enter your name here