ಬಂಟ್ವಾಳ: ಪಿಕಪ್ ಚಾಲಕನನ್ನು ಬರ್ಬರವಾಗಿ ಕಡಿದು ಕೊಲೆ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿ ಎಂಬಲ್ಲಿ ಇಂದು (ಮಂಗಳವಾರ) ನಡೆದಿದೆ.
ಕೊಳತ್ತಮಜಲು ನಿವಾಸಿ ಪಿಕಪ್ ಚಾಲಕನ ಸಹೋದರ ರಹೀಮ್ ಎಂಬಾತನನ್ನು ಕೊಲೆ ಮಾಡಲಾಗಿದೆ. ಈತ ಇರಾಕೋಡಿ ಎಂಬಲ್ಲಿ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ತಲ್ವಾರ್ ನಿಂದ ಕಡಿದು ಪರಾರಿಯಾಗಿದ್ದಾರೆ. ರಹೀಮ್ ಜೊತೆ ಇನ್ನೊಬ್ಬ ಕೂಡ ಇದ್ದು ಆತನಿಗೂ ತಲ್ವಾರ್ ನಿಂದ ಹಲ್ಲೆ ನಡೆಸಿದ್ದಾರೆ. ಆತನಿಗೆ ಕೈಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸರು ಭೇಟಿ ನೀಡಿದ್ದಾರೆ.
