Thursday, September 19, 2024

ಪರ್ಯಾಯ ಸ್ವಾಗತ ಸಮಿತಿ ಕಾರ್ಯಾಲಯಕ್ಕೆ ಪುತ್ತಿಗೆ ಶ್ರೀ ಭೇಟಿ: ಪರ್ಯಾಯ ಪೂರ್ವ ತಯಾರಿ ಬಗ್ಗೆ ಚರ್ಚೆ

Must read

ಉಡುಪಿ: ಬೆಂಗಳೂರಿನ ಗೋವರ್ಧನ ಕ್ಷೇತ್ರದಲ್ಲಿ ತಮ್ಮ50ನೇ ಚಾತುರ್ಮಾಸ್ಯ ವ್ರತವನ್ನು ಯಶಸ್ವಿಯಾಗಿ ಪೂರೈಸಿದ ಭಾವಿ ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ಇಂದು ಉಡುಪಿ ಕೃಷ್ಣಮಠಕ್ಕೆ ಭೇಟಿ ನೀಡಿ ಕೃಷ್ಣ ದೇವರ ದರ್ಶನ ಪಡೆದರು.

ಆ ಬಳಿಕ ಅನಂತೇಶ್ವರ ಮತ್ತು ಚಂದ್ರೇಶ್ವರ ದೇವರ ದರ್ಶನ ಪಡೆದು ಪುತ್ತಿಗೆ ಮಠದ ಪರ್ಯಾಯ ಸ್ವಾಗತ ಸಮಿತಿಯ ಕಾರ್ಯಾಲಯಕ್ಕೆ ಭೇಟಿ ನೀಡಿ , ಪರ್ಯಾಯದ ಪೂರ್ವ ತಯಾರಿ ಬಗ್ಗೆ ಚರ್ಚಿಸಿದರು.
ತಮ್ಮ ಚತುರ್ಥ ಪರ್ಯಾಯದ ವ್ಯವಸ್ಥೆಯು ಶಿಸ್ತುಬದ್ಧವಾಗಿ ಅತ್ಯುತ್ತಮವಾಗಿ ವೈಭವಯುತವಾಗಿ ನಡೆಸುವಂತೆ ಸ್ವಾಗತ ಸಮಿತಿಯ ಪದಾಧಿಕಾರಿಗಳಿಗೆ ಆದೇಶಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಡಾ. ಎಚ್. ಎಸ್. ಬಲ್ಲಾಳ್, ಕಾರ್ಯಾಧ್ಯಕ್ಷ ರಘುಪತಿ ಭಟ್ ಹಾಗೂ ಸಮಿತಿಯ ಸದಸ್ಯರಾದ ಉಮೇಶ್ ಭಟ್, ರವೀಂದ್ರ ಆಚಾರ್ಯ, ಚೈತನ್ಯ ಎಂ. ಜಿ., ನಾಗರಾಜ್ ಐತಾಳ್, ಶ್ರೀ ಮಠದ ನಾಗರಾಜ ಆಚಾರ್ಯ, ಪ್ರಸನ್ನ ಆಚಾರ್ಯ, ವಿಷ್ಣುಮೂರ್ತಿ ಉಪಾಧ್ಯ, ರಮೇಶ್ ಭಟ್ ಕೆ, ಸುಧೀಂದ್ರ ಆಚಾರ್ಯ, ಸತ್ಯನಾರಾಯಣ ಭಟ್, ಸಂತೋಷ್ ಪಿ. ಶೆಟ್ಟಿ ತೆಂಕರಗುತ್ತು ಉಪಸ್ಥಿತರಿದ್ದರು.

spot_img

More articles

LEAVE A REPLY

Please enter your comment!
Please enter your name here