Saturday, January 10, 2026

ಉಡುಪಿ: ಮನೆಗೆ ನುಗ್ಗಿ‌ ವ್ಯಕ್ತಿಯ‌ ಬರ್ಬರ ಹತ್ಯೆ

Must read

ಉಡುಪಿ: ವ್ಯಕ್ತಿಯೋರ್ವನನ್ನು ಸ್ನೇಹಿತರೇ ಬರ್ಬರವಾಗಿ ಹತ್ಯೆಗೈದ ಘಟನೆ ಪುತ್ತೂರಿನ ಸುಬ್ರಹ್ಮಣ್ಯ ನಗರದ ಲಿಂಗೋಟ್ಟುಗುಡ್ಡೆಯಲ್ಲಿ ನಡೆದಿದೆ.
ವಿನಯ್ ದೇವಾಡಿಗ (40) ಕೊಲೆಯಾದ ವ್ಯಕ್ತಿ. ವಿನಯ್ ಎಂದಿನಂತೆ ಮನೆಯಲ್ಲಿ ಊಟ ಮಾಡಿ ಮಲಗಿದ್ದರು. ನಿನ್ನೆ ರಾತ್ರಿ ಸುಮಾರು 11.45 ಕ್ಕೆ ಬಂದ ದುಷ್ಕರ್ಮಿಗಳು ಜೋರಾಗಿ ಮನೆಯ ಬಾಗಿಲು ಬಡಿದ್ದಾರೆ. ಭಯಗೊಂಡ ಪತ್ನಿ ಮನೆಯ ಬಾಗಿಲು ತೆರೆದಿದ್ದು, ವಿನಯ್ ಇದ್ದಾನ ಎಂದು ಕೇಳಿದ ಮೂವರು ದುಷ್ಕರ್ಮಿಗಳು ತಕ್ಷಣವೇ ಮಾರಕಾಸ್ತ್ರದೊಂದಿಗೆ ಬೆಡ್ ರೂಮ್ ಗೆ ನುಗ್ಗಿ ವಿನಯ್ ಗೆ ಹಲ್ಲೆ ಮಾಡಿದ್ದಾರೆ. ಇದನ್ನು ತಡೆಯಲು ಬಂದ ಪತ್ನಿಗೂ ಗಾಯವಾಗಿದೆ. ಗಂಭೀರವಾಗಿ ಗಾಯಗೊಂಡ ವಿನಯ್ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ‌ ನಡೆಸಿದ್ದಾರೆ.

spot_img

More articles

LEAVE A REPLY

Please enter your comment!
Please enter your name here