ಉಡುಪಿ: ಉಡುಪಿಯ ಸಿಟಿ ಸೆಂಟರ್ ಮಾಲ್ ಬಿಲ್ಡಿಂಗ್ ನಲ್ಲಿ ಆ. 15ರಂದು 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಸಂಭ್ರಮದಿಂದ ನಡೆಯಲಿದೆ.
ಅಂದು ಮಧ್ಯಾಹ್ನ 3 ಗಂಟೆಯಿಂದ ಚಿತ್ರಕಲಾ ಸ್ಪರ್ಧೆ, ಮಕ್ಕಳ (ಕಿಡ್ಸ್) ಫ್ಯಾಶನ್ ಶೋ, ರಸಪ್ರಶ್ನೆ (ಕ್ವಿಜ್) ಸ್ಪರ್ಧೆ ನಡೆಯಲಿದೆ. ಬಳಿಕ ವಿವಿಧ ಮನೋರಂಜನಾ ಕಾರ್ಯಕ್ರಮ ಜರುಗಲಿದ್ದು, ಆ ನಂತರ ಸರ್ಟಿಫಿಕೇಟ್ ಮತ್ತು ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಜರುಗಲಿದೆ.
ಉಡುಪಿ ನಗರಸಭೆ ಸದಸ್ಯ ಟಿ.ಜಿ. ಹೆಗ್ಡೆ, ಉದ್ಯಮಿ ಕೋಡಿ ಇಬ್ರಾಹಿಂ ಮೊಹಮ್ಮದ್, ಭಾರತ್ ಸೈಟ್ಸ್ ಮತ್ತು ಗೈಡ್ಸ್ ಮುಖ್ಯ ಆಯುಕ್ತ ಜಯಕರ್ ಶೆಟ್ಟಿ ಇಂದ್ರಾಳಿ, ಉದ್ಯಮಿಗಳಾದ ಪುರುಷೋತ್ತಮ ಶೆಟ್ಟಿ, ಹನೀಫ್, ನಿಶ್ಚಿಂತ್ ದಾಮೋದರ್, ಉಡುಪಿ ಜಾಮೀಯಾ ಮಸೀದಿ ಅಧ್ಯಕ್ಷ ರಿಯಾಜ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.


