ಉಡುಪಿ: ಧರ್ಮಸ್ಥಳ ಸ್ವಸಹಾಯ ಸಂಘದ ಸೇವಾ ಪ್ರತಿನಿಧಿಯಾಗಿ ಕೆಲಸ ಮಾಡಿಕೊಂಡಿದ್ದ ಯುವತಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಮುಖ್ಯಸ್ಥ ಲೈಂಗಿಕ ಕಿರುಕುಳ ನೀಡಿದ ಘಟನೆ ಕುಂದಾಪುರ ತಾಲೂಕಿನ ಅಮಾಸೆಬೈಲು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಆರೋಪಿಯನ್ನು ರಟ್ಟಾಡಿ ಶ್ರೀ ರಟ್ಟೆಶ್ವರ ದೇವಸ್ಥಾನ ವ್ಯವಸ್ಥಾಪನ ಸಮಿತಿ ಮುಖ್ಯಸ್ಥ ನವೀನಚಂದ್ರ ಶೆಟ್ಟಿ ರಟ್ಟಾಡಿ ಎಂದು ಗುರುತಿಸಲಾಗಿದೆ. ದೂರುದಾರೆ ಯುವತಿ ಧರ್ಮಸ್ಥಳದ ಧರ್ಮ ಸಂರಕ್ಷಣಾಯಾತ್ರೆಯ ಸಭೆಯ ಕುರಿತ ಆಹ್ವಾನ ಪತ್ರಿಕೆ ಕೊಡಲು ತೆರಳಿದ್ದರು. ಕುಂದಾಪುರ ತಾಲೂಕು ರಟ್ಟಾಡಿ ಗ್ರಾಮದ ಮಣಿಮಕ್ಕಿ ಎಂಬಲ್ಲಿಯ ಮನೆಗೆ ಬರುವಂತೆ ಕರೆದ ಆರೋಪಿ ಆಹ್ವಾನ ಪತ್ರಿಕೆ ಪಡೆಯುವಾಗ ಯುವತಿಯ ಕೈಯನ್ನು ಸ್ವರ್ಶಿಸಿದ್ದಾನೆ. ಇದರಿಂದ ಯುವತಿಗೆ ಮುಜುಗರ ಉಂಟಾಗಿದ್ದು, ನಂತರ ಆಕೆ ಹೊರಡಲು ಅನುವಾದಾಗ ಎರಡು ನಿಮಿಷ ನಿಲ್ಲುವಂತೆ ಒತ್ತಾಯಿಸಿದ ಆರೋಪಿ ಹತ್ತಿರಕ್ಕೆ ಎಳೆದುಕೊಂಡು ಬಲ ಕೆನ್ನೆಗೆ ಮುತ್ತು ಕೊಟ್ಟಿದ್ದಾನೆ. ಗಾಬರಿಗೊಂಡ ಯುವತಿ ಅಲ್ಲಿಂದ ತಕ್ಷಣ ಎದ್ದು ಹೊರಟರೂ ಮನೆಗೆ ಬರುವಂತೆ ಹೇಳುತ್ತಾ ಮನೆಯ ಬಾಗಿಲವರೆಗೂ ಹಿಂಬಾಲಿಸಿಕೊಂಡು ಬಂದಿದ್ದಾಗಿ ಯುವತಿ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಅಮಾಸೆಬೈಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ: ಆಹ್ವಾನ ಪತ್ರಿಕೆ ಕೊಡಲು ಬಂದ ಯುವತಿಗೆ ಮುತ್ತುಕೊಟ್ಟ ದೇವಸ್ಥಾನ ವ್ಯವಸ್ಥಾಪನ ಸಮಿತಿ ಮುಖ್ಯಸ್ಥ
More articles

