Thursday, September 19, 2024

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಪೊಣ್ಣು ಪಿಲಿ ನಲಿಕೆ ಸ್ಪರ್ಧೆ : ಯಶ್‍ಪಾಲ್ ಎ. ಸುವರ್ಣ

Must read

ಉಡುಪಿ: ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನದ
ಸಹಯೋಗದೊಂದಿಗೆ ಉಚ್ಚಿಲ ದಸರಾ ಮಹೋತ್ಸವದ ಅಂಗವಾಗಿ ಅಕ್ಟೋಬರ್ 21ರಂದು ಮಧ್ಯಾಹ್ನ 2.30ಕ್ಕೆ ಶಾಲಿನಿ ಡಾ. ಜಿ.ಶಂಕರ್ ತೆರೆದ ಸಭಾಂಗಣ ಉಚ್ಚಿಲದಲ್ಲಿ ಪೊಣ್ಣು ಪಿಲಿ ನಲಿಕೆ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷ, ಉಡುಪಿ ಶಾಸಕ ಯಶ್‍ಪಾಲ್ ಎ. ಸುವರ್ಣ ತಿಳಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಹುಲಿ ಕುಣಿತದಲ್ಲಿ ಆಸಕ್ತಿ ತೋರುತ್ತಿದ್ದು, ತೆರೆಮರೆಯ ಪ್ರತಿಭೆಗಳಿಗೆ ಅವಕಾಶ ನೀಡುವ ಸಲುವಾಗಿ ಈ ವೇದಿಕೆ ಕಲ್ಪಿಸಲಾಗಿದೆ. ಗುಂಪು ಹಾಗೂ ವೈಯಕ್ತಿಕ “ಸೀರೆ ವಿಭಾಗ”ದಲ್ಲಿ ಸ್ಪರ್ಧೆಯು ನಡೆಯಲಿದ್ದು, ಮಹಿಳೆಯರಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ. ವಯಸ್ಸಿನ ಮಿತಿ ಇರುವುದಿಲ್ಲ, ಹಿನ್ನಲೆ ಸಂಗೀತ (ತಾಸೆ&ವಾದ್ಯ) ಒದಗಿಸಲಾಗುವುದು ಹಾಗೂ ವೇಷ ಭೂಷಣಕ್ಕೆ ಪ್ರಾಶಸ್ತ್ಯ ನೀಡಲಾಗುವುದಿಲ್ಲ.

ಪ್ರತಿ ವಿಭಾಗದಲ್ಲಿ ಪ್ರಥಮ, ದ್ವಿತೀಯ, ತೃತೀಯ ವಿಜೇತರನ್ನು ಆಯ್ಕೆ ಮಾಡಲಿದ್ದು, ಸ್ಪರ್ಧೆಯಲ್ಲಿ ಭಾಗವಹಿಸಲು ನೋಂದಣಿಗಾಗಿ ಹಾಗೂ ಸ್ಪರ್ಧೆಯ ಹೆಚ್ಚಿನ ಮಾಹಿತಿಗಾಗಿ 9972120332 ಮೊಬೈಲ್ ಸಂಖ್ಯೆಗೆ ಸಂಪರ್ಕಿಸಬಹುದು. ಮಹಿಳೆಯರು ಈ ಸ್ಪರ್ಧೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಯಶ್‍ಪಾಲ್ ಎ. ಸುವರ್ಣ ತಿಳಿಸಿದ್ದಾರೆ.

spot_img

More articles

LEAVE A REPLY

Please enter your comment!
Please enter your name here