Thursday, September 19, 2024

ರಾಜ್ಯ ಸರ್ಕಾರ ನಾಲ್ಕೇ ತಿಂಗಳಲ್ಲಿ ಡಯಾಲಿಸೀಸ್ ಕೇಂದ್ರ ನಿರ್ವಹಿಸಲು ಆಗದಷ್ಟು ದಿವಾಳಿಯಾಗಿದೆ‌: ಸಚಿವೆ ಶೋಭಾ ಕರಂದ್ಲಾಜೆ ಆಕ್ರೋಶ

Must read

ಉಡುಪಿ: ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಡಯಾಲಿಸೀಸ್ ಬೆಡ್ ಗಳೆಲ್ಲ ಖಾಲಿ ಇದೆ. ಡಯಾಲಿಸೀಸ್ ಕಾರ್ಯ ಸಂಪೂರ್ಣ ಸ್ಥಗಿತಗೊಂಡಿದ್ದು, ಎಲ್ಲಾ 11 ಡಯಾಲಿಸೀಸ್ ಯಂತ್ರಗಳು ಕೂಡ ವರ್ಕ್ ಆಗುತ್ತಿಲ್ಲ. ರಾಜ್ಯ ಸರ್ಕಾರ ನಿದ್ದೆ ಮಾಡುತ್ತಿದ್ದು, ಬಡವರ ಗೋಳನ್ನು ಕೇಳುವವರಿಲ್ಲ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಡುಪಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಒಂದು ತಿಂಗಳಿನಿಂದ ರೋಗಿಗಳು ಖಾಸಗಿ ಆಸ್ಪತ್ರೆಗೆ ಹೋಗುತ್ತಿದ್ದಾರೆ. ರಾಜ್ಯದ 122 ಕೇಂದ್ರದಲ್ಲಿ ಕೂಡ ಎಸ್ ಕೆ ಸಂಜೀವಿನಿ ಗುತ್ತಿಗೆ ಸಂಸ್ಥೆಯ ಡಯಾಲಿಸೀಸ್ ಯಂತ್ರಗಳು ಸ್ಥಗಿತವಾಗಿದೆ. ಅಕ್ಟೋಬರ್ 1ರಿಂದ ನಮ್ಮ ಸೇವೆ ನಿಲ್ಲಿಸುತ್ತೇವೆ ಎಂದು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಹೊಸ ಮಷೀನ್ ಇಲ್ಲ ರಿಪೇರಿ ಕಾರ್ಯ ಆಗುತ್ತಿಲ್ಲ. ಆರೋಗ್ಯ ಸೇವೆ ನಡೆಯುತ್ತಿಲ್ಲ. ಆರೋಗ್ಯ ಇಲಾಖೆ ಕಮಿಷನರ್ ಗೆ ಮಾಹಿತಿ ಇಲ್ಲ. ಸರಕಾರ ಏನು ಮಾಡುತ್ತಿದೆ?. ಬಡವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೆ ಬಿಲ್ ಭರಿಸುವವರು ಯಾರು?. ಬೇಜವಾಬ್ದಾರಿ ಸರಕಾರ ಅವರವರೇ ಕಿತ್ತಾಡೋದ್ರಲ್ಲಿ ತಲ್ಲಿನವಾಗಿದೆ ಎಂದು ಗುಡುಗಿದರು.

ರಾಜ್ಯದ ಎಲ್ಲಾ ಡಯಾಲಿಸಿಸ್ ಕೇಂದ್ರಗಳ ಪರಿಸ್ಥಿತಿ ಇದೆ ಆಗಿದೆ. ರೋಗಿಗಳ ಡಯಾಲಿಸಿಸ್ ಬಿಲ್ ಸರಕಾರ ವಾಪಸ್ ಕೊಡಬೇಕು. ಖಾಸಗಿ ವ್ಯಕ್ತಿಗಳು ಶಾಸಕರು ಹಣ ಭರಿಸಲು ಸಾಧ್ಯವಿಲ್ಲ. ರಾಜ್ಯದ ಬಡ ಕಿಡ್ನಿ ರೋಗಿಗಳ ಪರಿಸ್ಥಿತಿ ಏನಾಗಿದೆ ಗೊತ್ತಿಲ್ಲ. ಸಮಸ್ಯೆ ಗೊತ್ತಿದ್ದರೂ ರಾಜ್ಯ ಸರ್ಕಾರ ಪರ್ಯಾಯ ವ್ಯವಸ್ಥೆ ಯಾಕೆ ಮಾಡಿಲ್ಲ. ರಾಜ್ಯ ವಿನಂತಿ ಮಾಡಿದರೆ ಕೇಂದ್ರ ಸಹಕಾರ ಮಾಡುತ್ತದೆ. ಕೇಂದ್ರ ಸರ್ಕಾರ ಹಣ ಕೊಡಲು ಸಿದ್ಧವಿದೆ. ಹೊಸ ಯಂತ್ರಗಳು ಮತ್ತು ತರಬೇತಿಯನ್ನು ಕೇಂದ್ರ ಸರ್ಕಾರ ಕೊಡುತ್ತದೆ. ರಾಜ್ಯ ಸರ್ಕಾರ ನಾಲ್ಕೇ ತಿಂಗಳಲ್ಲಿ ದಿವಾಳಿಯಾಗಿದೆ‌ ಎಂದರು.

spot_img

More articles

LEAVE A REPLY

Please enter your comment!
Please enter your name here