Tuesday, September 17, 2024

ಡಿಜಿಟಲ್ ಮೀಡಿಯಾದ ಅತಿರಂಜಿತ, ವೈಭವೀಕರಣ ಪ್ರವೃತ್ತಿಗೆ ಮೂಗುದಾರ ಅಗತ್ಯ: ಪತ್ರಕರ್ತ ರಹೀಂ ಉಜಿರೆ

Must read

ಉಡುಪಿ: ಆಧುನಿಕ ಡಿಜಿಟಲ್ ಮೀಡಿಯಾವನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ. ಕಾರಣ ಅದು ಭವಿಷ್ಯದ ಮಾಧ್ಯಮವಾಗಿ ರೂಪುಗೊಳ್ಳುತ್ತಿದೆ. ಆದರೆ ಡಿಜಿಟಲ್ ಮೀಡಿಯಾಗಳ ಅತಿಯಾದ ವೈಭವೀಕರಣ ಪ್ರವೃತ್ತಿ ಮತ್ತು ಅತಿರೇಕದ ಸುದ್ದಿ ಮತ್ತು ವರದಿಗಳಿಗೆ ಮೂಗುದಾರ ಅಗತ್ಯ ಎಂದು ಪತ್ರಕರ್ತ ರಹೀಂ ಉಜಿರೆ ಹೇಳಿದರು.

ಅವರು ಎಂಜಿಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳೇ ನಡೆಸುವ “ಮಾತಿನ ಮಂಟಪ” ಕಾರ್ಯಕ್ರಮದಲ್ಲಿ ‘ಮೊಬೈಲ್ ಜರ್ನಲಿಸಂ’ ಬಗ್ಗೆ ಉಪನ್ಯಾಸ ನೀಡುತ್ತಾ ಮಾತನಾಡಿದರು.

ಡಿಜಿಟಲ್ ಮೀಡಿಯಾ ಇತ್ತೀಚೆಗೆ ಸಾಕಷ್ಟು ಜನಪ್ರಿಯಗೊಳ್ಳುತ್ತಿದೆ. ಪತ್ರಿಕೆಗಳ ಓದುಗರು ಮತ್ತು ಟಿವಿ ಚಾನೆಲ್ ಗಳ ವೀಕ್ಷಕರು ಡಿಜಿಟಲ್ ಮೀಡಿಯಾ ದತ್ತ ಒಲವು ತೋರುತ್ತಿದ್ದಾರೆ. ಇನ್ನೊಂದಡೆ ಡಿಜಿಟಲ್ ಮೀಡಿಯಾಗಳು ಜನರ ಖಾಸಗಿ ಸಂಗತಿಗಳನ್ನು ವೈಭವೀಕರಣ ಮಾಡುತ್ತ, ಕೆಲವೊಮ್ಮೆ ಅಪಪ್ರಚಾರ ಮಾಡುತ್ತ ತಮ್ಮ ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿದ್ದು,ಇಂತಹ ಸುದ್ದಿಗಳಿಗೆ ಕಡಿವಾಣ ಅಗತ್ಯ ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಸುಚಿತ್ ಕೋಟ್ಯಾನ್ ವಹಿಸಿದ್ದರು. ಉಪನ್ಯಾಸಕ ಮನೋಶ್ ಉಪಸ್ಥಿತರಿದ್ದರು. ಪತ್ರಿಕೋದ್ಯಮ ಮೊದಲ ವರ್ಷದ ವಿದ್ಯಾರ್ಥಿನಿ ಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು.

spot_img

More articles

LEAVE A REPLY

Please enter your comment!
Please enter your name here