Saturday, August 29, 2026

ಪೆರ್ಡೂರು ಅನಂತ ದೇವಸ್ಥಾನದ ಜೀರ್ಣೋದ್ಧಾರ ಸೂಕ್ತ ಸಮಯದಲ್ಲಿ ಭವ್ಯವಾಗಿ ನೆರವೇರಲಿ – ವಿದ್ಯಾಸಾಗರತೀರ್ಥ ಶ್ರೀ

Must read

ಉಡುಪಿ: ಪೆರ್ಡೂರು ಶ್ರೀ ಅನಂತ ದೇವಸ್ಥಾನದ ಜೀರ್ಣೋದ್ದಾರ ಕಾರ್ಯ ಪ್ರಶಂಸನೀಯ‌. ಪದ್ಮನಾಭ ಸೃಷ್ಟಿಯ ಪಾಲನೆ ಮಾಡುವ ದೇವರು.ನಮಗೆ ಈ ಅವಕಾಶ ಒದಗಿ ಬಂದಿದೆ.ಇದಕ್ಕೆ ವಿಶೇಷ ಫಲ ಸಿಗಲಿದೆ.ಊರವರು
ತಮ್ಮ ಊರಿನ ಜೀರ್ಣೋದ್ದಾರಕ್ಕೆ ಸಹಕಾರ ನೀಡಬೇಕು.ಈ ಮೂಲಕ ದೇವರ ವಿಶೇಷ ಅನುಗ್ರಹಕ್ಕೆ ಪಾತ್ರರಾಗಬೇಕು.ಈ ದೇವಸ್ಥಾನದ ಜೀರ್ಣೋದ್ಧಾರ ಸೂಕ್ತ ಸಮಯದಲ್ಲಿ ಭವ್ಯವಾಗಿ ನೆರವೇರಲಿ ಎಂದು ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಗಳು ಆಶೀರ್ವಚನ ನೀಡಿದರು.
ಅವರು ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಕಾರ್ಯಾಲಯದ ಉದ್ಘಾಟನೆ ನೆರವೇರಿಸಿ ಆಶೀರ್ವಚನ ನೀಡಿದರು.
ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ದೇವರಿಗೋಸ್ಕರ ಅಲ್ಲ, ಭಕ್ತರಿಗೋಸ್ಕರ. ಇದರ ಫಲವಾಗಿ ದೇವರು ನಮಗೆ ಹತ್ತು ಪಾಲು ವಾಪಾಸು ಕೊಡ್ತಾನೆ. ದೇವಸ್ಥಾನ ನಿರ್ಮಾಣ ಮಾಡಿದರೆ ನಮಗೆ ಶ್ರೇಯ ದೊರಕುತ್ತದೆ.ಭಕ್ತರಾದ ನಾವು ದೇವರ ಆರಾಧನೆ ಮಾಡಿ ದೇವರಿಂದ ಫಲ ನಿರೀಕ್ಷೆ ಮಾಡ್ತೇವೆ.ಇದು ನನ್ನ ಕರ್ತವ್ಯ ಎಂಬ ಮನಸಿನಲ್ಲಿ ಮಾಡಿದಾಗ ದೇವರ ಅನುಗ್ರಹ ನಮಗೆ ಸಿಗುತ್ತದೆ ಎಂದರು.

ಸಭಾ ಕಾರ್ಯಕ್ರಮದಲ್ಲಿ ದೇವಸ್ಥಾನದ ತ್ರಿಡಿ ವಿಡಿಯೋ ಅನಾವರಣ ಮಾಡಲಾಯಿತು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸೇವಾ ಕಚೇರಿಯನ್ನು ಉದ್ಘಾಟಿಸಿದರು. ಮಾಜಿ ಸಚಿವ ವಿನಯಕುಮಾರ್ ಸೊರಕೆ ದೇವಸ್ಥಾನದ ಜೀರ್ಣೋದ್ಧಾರದ ಯೋಜಿತ ಮಾದರಿಯನ್ನು ಅನಾವರಣಗೊಳಿಸಿದರು. ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಸಭಾಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್ ಮಾಹಿತಿ ಕೇಂದ್ರ ಉದ್ಘಾಟಿಸಿದರು. ತುಳುಕೂಟ ಬೆಂಗಳೂರು ಇದರ ಅಧ್ಯಕ್ಷ ಬಿ. ದಿನೇಶ್ ಹೆಗ್ಡೆ ಯೋಜಿತ ನಕ್ಷೆಯ ವಿಡಿಯೋ ಅನಾವರಣ ಮಾಡಿದರು. ಹಿರಿಯ ಅರ್ಚಕ, ಸಮಿತಿಯ ಗೌರವಾಧ್ಯಕ್ಷ ಪಿ. ಕೃಷ್ಣ ಅಡಿಗ ಗಣಕಯಂತ್ರ ಚಾಲನೆ ನೀಡಿದರು.
ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಶಾಂತರಾಮ ಸೂಡ ಕೆ. ಅಧ್ಯಕ್ಷತೆ ವಹಿಸಿದ್ದರು. ಶ್ರೀಕ್ಷೇತ್ರದ ತಂತ್ರಿಗಳಾದ ಕೆ.ಜಿ. ವಿಠಲ ತಂತ್ರಿ‌ ಕೊರಂಗ್ರಪಾಡಿ, ಕೆ.ಪಿ. ಕುಮಾರಗುರು ತಂತ್ರಿ ಕೊರಂಗ್ರಪಾಡಿ, ದೇವಳದ ವಾಸ್ತುತಜ್ಞ ಸುಬ್ರಹ್ಮಣ್ಯ ಭಟ್ ಗುಂಡಿಬೈಲು, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಮೋದ್ ರೈ ಪಳಜೆ, ಕಾರ್ಯನಿರ್ವಹಣಾಧಿಕಾರಿ ಗುರುರಾಜ್ ಪಿ.ಆರ್., ಸರದಿ ಅರ್ಚಕ ಪಿ. ಶ್ರೀಧರ ಅಡಿಗ ಉಪಸ್ಥಿತರಿದ್ದರು.
ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಲಾಲ್ ಪಕ್ಕಾಲ್ ಸ್ವಾಗತಿಸಿದರು.

spot_img

More articles

LEAVE A REPLY

Please enter your comment!
Please enter your name here