Sunday, August 16, 2026

ಮನೆ ತೆರಿಗೆ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ಸೇವೆಯಿಂದ ವಜಾ

Must read

ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ ಮನೆ ತೆರಿಗೆ ವಸೂಲಾದ ಹಣವನ್ನು ಪಂಚಾಯಿತಿ ಖಾತೆಗೆ ಜಮಾ ಮಾಡದೆ ಸ್ವಂತಕ್ಕೆ ಬಳಸಿಕೊಂಡ ಆರೋಪದ ಮೇರೆಗೆ ಪಂಚಾಯಿತಿ ಬಿಲ್ಲು ವಸೂಲಿಗ ಸಿಬ್ಬಂದಿ ಮಂಜುನಾಥ್ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.
ಉಡುಪಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಅವರು ಬುಧವಾರ ವಜಾ ಆದೇಶ ಹೊರಡಿಸಿದ್ದಾರೆ.
ಮಂಜುನಾಥ್ ಅವರು 2023–24ನೇ ಸಾಲಿನಲ್ಲಿ ₹1,18,367 ಹಾಗೂ 2024–25ನೇ ಸಾಲಿನಲ್ಲಿ ₹3,36,021 ಸೇರಿದಂತೆ ಒಟ್ಟು ₹4,54,388 ಮನೆ ತೆರಿಗೆ ಹಣವನ್ನು ಪಂಚಾಯಿತಿ ಬ್ಯಾಂಕ್ ಖಾತೆಗೆ ಜಮಾ ಮಾಡದೆ ಸ್ವಂತಕ್ಕೆ ಬಳಸಿಕೊಂಡು ದುರುಪಯೋಗಪಡಿಸಿಕೊಂಡಿರುವುದು ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.
ಈ ಕುರಿತು ಶಿವಪುರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಶೋಕ್ ಅವರು ಹೆಬ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಹಣದ ದುರುಪಯೋಗದ ವಿಚಾರ ಬೆಳಕಿಗೆ ಬಂದ ಬಳಿಕ ಪಂಚಾಯಿತಿ ವತಿಯಿಂದ ಮಂಜುನಾಥ್ ಅವರಿಗೆ ನೋಟಿಸ್ ನೀಡಲಾಗಿತ್ತು. ಈ ವೇಳೆ ಅವರು ಸುಮಾರು ₹3 ಲಕ್ಷವನ್ನು ಪಂಚಾಯಿತಿಗೆ ಮರುಪಾವತಿಸಿದ್ದು, ಉಳಿದ ಹಣವನ್ನು ಪಾವತಿಸದೆ ವಂಚಿಸಿರುವುದಾಗಿ ಪಿಡಿಒ ದೂರಿನಲ್ಲಿ ತಿಳಿಸಿದ್ದಾರೆ.
ಪಂಚಾಯಿತಿ ಹಣವನ್ನು ದುರುಪಯೋಗಪಡಿಸಿಕೊಂಡು ನಂಬಿಕೆ ದ್ರೋಹ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಮಂಜುನಾಥ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

spot_img

More articles

LEAVE A REPLY

Please enter your comment!
Please enter your name here