ಉಡುಪಿ: ಇತಿಹಾಸ ಪ್ರಸಿದ್ಧ ಮಹತೋಬಾರ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ಪವಿತ್ರಪಾಣಿಯಾಗಿ ಜನಾರ್ದನ್ ಕೊಡವೂರು ಅವರನ್ನು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಆಯ್ಕೆ ಮಾಡಿ ನೇಮಕ ಮಾಡಿದೆ.
ಈ ಹಿಂದೆ ಪವಿತ್ರಪಾಣಿ ಹುದ್ದೆಯಲ್ಲಿದ್ದ ಕೆ. ಗೋವಿಂದ ಐತಾಳ್ ಅವರು ಸ್ವಯಂ ನಿವೃತ್ತಿ ಘೋಷಿಸಿದ ಹಿನ್ನೆಲೆಯಲ್ಲಿ ತೆರವಾದ ಹುದ್ದೆಗೆ ಜನಾರ್ದನ್ ಕೊಡವೂರು ಅವರನ್ನು ನೇಮಕ ಮಾಡಲಾಗಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.
ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ಪವಿತ್ರಪಾಣಿಯಾಗಿ ಜನಾರ್ದನ್ ನೇಮಕ

